Breaking News

ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ಕೆಎಸ್ಆರ್​ಟಿಸಿ ಬಸ್​ಗಳನ್ನು ಎರವಲು ಸೇವೆ ನೀಡಿದ್ದರಿಂದ ಇಂದು ಬಸ್ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ

Spread the love

ಬೆಂಗಳೂರು: ದಾವಣಗೆರೆಯಲ್ಲಿ ಇಂದು ನಡೆಯುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​ಗಳನ್ನು ಎರವಲು ಸೇವೆಗೆ ನೀಡಿದ್ದು, ಇದರಿಂದ ಇಂದು ನಗರದಲ್ಲಿ ಬಸ್ ಪ್ರಯಾಣಿಕರಿಗೆ ತೊಂದರೆ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.

ನಿನ್ನೆ ಮಧ್ಯಾಹ್ನವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 700ಕ್ಕೂ ಹೆಚ್ಚು ಬಸ್ಸುಗಳು ದಾವಣಗೆರೆಯತ್ತ ಸಿದ್ದರಾಮಯ್ಯ ಅಭಿಮಾನಿಗಳನ್ನ ಕರೆದುಕೊಂಡು ತೆರಳಿದೆ. ಸಮಾರಂಭದ ಆಯೋಜಕರು ಈ ಬಸ್​ಗಳನ್ನು ಗುತ್ತಿಗೆ ರೂಪದಲ್ಲಿ ಪಡೆದಿದ್ದು, ಇಂದು ರಾತ್ರಿ ವೇಳೆಗೆ ವಾಪಸ್​ ಆಗಲಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ನಗರ ಕೇಂದ್ರದಿಂದ ವಿವಿಧ ಜಿಲ್ಲಾ ಕೇಂದ್ರಗಳಿಗೆ ತೆರಳುವ ಪ್ರಯಾಣಿಕರಿಗೆ ಇಂದು ಬಸ್ ಲಭ್ಯತೆ ಸಮರ್ಪಕವಾಗಿ ಸಿಗುವ ಸಾಧ್ಯತೆ ಕಡಿಮೆ ಇದೆ.

ನಿನ್ನೆ ಮಧ್ಯಾಹ್ನವೇ ಬಹುತೇಕ ಬಸ್​​​ಗಳು ದಾವಣಗೆರೆಯತ್ತ ಪ್ರಯಾಣ ಬೆಳೆಸಿದ್ದರಿಂದ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಭಾಗಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್​ಗಳ ಕೊರತೆ ಎದುರಾಗಿತ್ತು. ಮಧ್ಯಾಹ್ನದ ನಂತರ ಹಲವಡೆಗಳಿಗೆ ಬಸ್ ಸಂಪರ್ಕ ಲಭಿಸಲಿಲ್ಲ. ಇದೇ ಸ್ಥಿತಿ ಇಂದು ಸಹ ಮುಂದುವರೆಯಲಿದ್ದು, ಬಸ್​ಗಳನ್ನೇ ಅವಲಂಬಿಸಿರುವ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗುವುದು ಶತಸಿದ್ಧ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ