Breaking News

ಬಿಜೆಪಿಗೆ ಬಿಸಿ ತಂದ ಸಿದ್ದರಾಮೋತ್ಸವದ ಯಶಸ್ಸು

Spread the love

ಬೆಂಗಳೂರು: ಸಾಲು ಸಾಲು ಸವಾಲುಗಳನ್ನು ಎದುರಿಸುತ್ತಾ ಹೈರಾಣಾಗಿದ್ದ ರಾಜ್ಯ ಸರಕಾರಕ್ಕೆ‌ ಸಿದ್ದರಾಮಯ್ಯ ಅಮೃತ ಮಹೋತ್ಸವದ ಯಶಸ್ಸು ಈಗ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಪಕ್ಷ ಹಾಗೂ‌ ಹೈಕಮಾಂಡ್ ನ ವಿಮರ್ಶೆಯ‌ ನಿಕಶಕ್ಕೆ ಒಳಗಾಗುವ ಸಾಧ್ಯತೆ ನಿಚ್ಚಳವಾಗಿದೆ.

 

ಬೊಮ್ಮಾಯಿ ಅವರ ಕಾರ್ಯಶೈಲಿ, ಕಡತ ವಿಲೇವಾರಿಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಸಂಘ‌ಪರಿವಾರದ ಮುಖಂಡರು‌ ಇತ್ತೀಚೆಗೆ ತೀವ್ರ ಬೇಸರ‌ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಹತ್ಯೆಯಿಂದ‌ ಸೃಷ್ಟಿಯಾದ ಸೈದ್ಧಾಂತಿಕ ಅಸಮಾಧಾನ ಬೊಮ್ಮಾಯಿ ಸರಕಾರವನ್ನು ಅಲ್ಲಾಡಿಸಿತ್ತು.

ಈ ಮಧ್ಯೆ ಸಿದ್ದರಾಮಯ್ಯ ಅಮೃತ‌ ಮಹೋತ್ಸವದ ಯಶಸ್ಸು ಮಲಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಡಿದೆಬ್ಬಿಸಿದ್ದು ರಾಜಕೀಯವಾಗಿ ಬೊಮ್ಮಾಯಿ ಸರಕಾರಕ್ಕೆ ಬಹುದೊಡ್ಡ ಹಿನ್ನಡೆಯನ್ನು ಸೃಷ್ಟಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ‌ ಬೆಂಗಳೂರಿಗೆ ಆಗಮಿಸಿರುವ ಸಂದರ್ಭದಲ್ಲೇ ಹುಟ್ಟಿರುವ ಈ ಬೆಳವಣಿಗೆ ಬೊಮ್ಮಾಯಿ ಅವರನ್ನು‌ ಇಕ್ಕಟ್ಟಿಗೆ ಸಿಲುಕಿಸಿದೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ