Breaking News

ಜಮೀನು ಕೆಲಸಕ್ಕೆಂದು ಹೋದ ರೈತ ನಾಪತ್ತೆ.. ನೀರುಪಾಲು ಶಂಕೆ

Spread the love

ರಾಯಚೂರು: ನಿನ್ನೆ ಸುರಿದ ಧಾರಾಕಾರ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರೈತನೋರ್ವ ಕೊಚ್ಚಿ ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಹೊರವಲಯದ ಹಳ್ಳದಲ್ಲಿ ಘಟನೆ ಜರುಗಿದೆ. ವೆಂಕಟೇಶ(36) ಕೊಚ್ಚಿ ಹೋದ ರೈತ ಎಂದು ಹೇಳಲಾಗುತ್ತಿದೆ.

ಜಮೀನು ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಮರಳುವಾಗ ಘಟನೆ ನಡೆದಿದೆ ಎಂದು ಶಂಕಿಸಲಾಗುತ್ತಿದೆ. ಘಟನಾ ಮಾಹಿತಿ ದೊರೆತ ಬಳಿಕ ಸ್ಥಳಕ್ಕೆ ಮಾನ್ವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಳ್ಳಗಳೆಲ್ಲ ನೀರಿನಿಂದ ಭರ್ತಿಯಾಗಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿವೆ. ಇದರಿಂದ ಅಲ್ಲಲ್ಲಿ ಸಂಚಾರಕ್ಕೆ ಅಡಚಣೆಯಾಗಿ ತೊಂದರೆ ಅನುಭವಿಸುವಂತೆ ಆಗಿದೆ.


Spread the love

About Laxminews 24x7

Check Also

ದೇಶದೊಳಗೆ ನುಸುಳುಕೋರರು ಬರುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ : ಮಾಜಿ ಸಚಿವ ಕುಮಾರಬಂಗಾರಪ್ಪ

Spread the loveರಾಯಚೂರು : ದೇಶದೊಳಗೆ ನುಸುಳುಕೋರರು ಬರುತ್ತಿರುವುದರ ಕುರಿತಂತೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಅದರ ಮಾಹಿತಿ ಸಂಗ್ರಹಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ