Breaking News

ನಕಲಿ ಪತ್ರಕರ್ತರ ಹಾವಳಿ ತಡೆಗಟ್ಟಲು ಸಾರ್ವಜನಿಕರು ಪೋಲಿಸರೊಂದಿಗೆ ಸಹಕರಿಸ ಬೇಕು ಎಂದ ಬೆಳಗಾವಿ ಎಸ್ ಪಿ

Spread the love

ನಕಲಿ ಪತ್ರಕರ್ತರ ಹಾವಳಿ ತಡೆಗಟ್ಟಲು ಸಾರ್ವಜನಿಕರು ಪೋಲಿಸರೊಂದಿಗೆ ಸಹಕರಿಸ ಬೇಕು ಎಂದು ಬೆಳಗಾವಿ ಎಸ್ ಪಿ ಸಂಜೀವಕುಮಾರ ಹೇಳಿದರು.

ಅವರು ಇಂದು ಹುಕ್ಕೇರಿ ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ನಿಪ್ಪಾಣಿ ನಗರದ ಕುರ್ಲಿ ಗ್ರಾಮದಲ್ಲಿ ಪತ್ರಕರ್ತರು ಎಂದು ಹೇಳಿ ಮಹಿಳೆಯರು ಇದ್ದ ಮನೆಗೆ ಪ್ರವೇಶಿಸಿ ನಿಮ್ಮ ಮನೆಯಲ್ಲಿ ಆಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ದಾಸ್ತಾನು ಮಾಡಿದ್ದಿರಿ ಇದನ್ನು ವಿಡಿಯೋ ಮಾಡಿ ಪ್ರಸಾರ ಮಾಡಲಾಗುವದು ಎಂದು ಹೇಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ,

ಮನೆಯಲ್ಲಿದ್ದ ಮಹಿಳೆ ಅವರ ಚಲನ ವಲನಗಳನ್ನು ರಹಸ್ಯವಾಗಿ ವಿಡಿಯೋ ಮಾಡಿ ನಿಪ್ಪಾಣಿ ಪೋಲಿಸರಿಗೆ ಮೂವರ ಮೇಲೆ ದೂರು ನೀಡಿದ್ದಾರೆ , ಕಾರಣ ಯಾರೆ ಬಂದು ನಾವು ಪತ್ರಕರ್ತರು ಎಂದು ಹೇಳಿ ಹಣಕ್ಕೆ ಬೇಡಿಕೆ ಇಟ್ಟರೆ ಅಥವಾ ನಿಮಗೆ ಬ್ಲಾಕ್ ಮೇಲೆ ಮಾಡಲು ಬಂದರೆ ಕೂಡಲೇ 112 ನಂಬರಿಗೆ ಪೋನ ಮಾಡಿ ಪೋಲಿಸರಿಗೆ ಸಹಕರಿಸ ಬೇಕು ಎಂದರು ,

ಈ ಸಂದರ್ಭದಲ್ಲಿ ಅಡಿಷನಲ್ ಎಸ್ ಪಿ ನಂದಗಾಂವಿ, ಗೋಕಾಕ ಡಿ ಎಸ್ಪಿ ಮನೋಜಕುಮಾರ ನಾಯಕ, ಯಮಕನಮರ್ಡಿ ಇನ್ಸಪೇಕ್ಟರ ರಮೇಶ ಛಾಯಾಗೋಳ, ಹುಕ್ಕೇರಿ ಇನ್ಸಪೇಕ್ಟರ ರಫೀಕ ತಹಸಿಲ್ದಾರ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ