Breaking News

ಇನ್ನೊಂದು ನೇಮಕ‌ ಹಗರಣ ಬಯಲು: ಬಿಜೆಪಿ ಸರಕಾರಕ್ಕೆ ಮತ್ತೆ ಮುಜುಗರ

Spread the love

ಬೆಂಗಳೂರು: ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್​ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ‌ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು.

ಸಚಿವರು ನನಗೆ ಆಪ್ತರೆಂದು ಹೇಳಿ ಹಲವು ಅಭ್ಯರ್ಥಿಗಳಿಗೆ ವಂಚನೆ ಮಾಡಿದ್ದು, ಇಲಾಖೆಯ ಎಫ್ ಡಿಎ, ಎಸ್ ಡಿಎ ಹುದ್ದೆಗಳಿಗೆ ನಕಲಿ ಆದೇಶ ಪ್ರತಿ ಸೃಷ್ಟಿ ಮಾಡಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಿದ 63 ಜನರನ್ನು ಆರೋಪಿ ಆಯ್ಕೆ ಮಾಡಿದ್ದ. 2 ರಿಂದ 4 ಲಕ್ಷ ರೂ.ಯಂತೆ 25 ಲಕ್ಷ ಹಣ ಪಡೆದು ವಂಚಿಸಿದ್ದ ಎಂಬ ಆರೋಪ ವ್ಯಕ್ತವಾಗಿದೆ.


Spread the love

About Laxminews 24x7

Check Also

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ,

Spread the love ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ, ಜನ ಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದ್ರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ