Breaking News
Home / ರಾಜಕೀಯ / 15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಶಿವರಾಜ ತಂಗಡಗಿ

15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ: ಶಿವರಾಜ ತಂಗಡಗಿ

Spread the love

ಹುಲಗಿ (ಕೊಪ್ಪಳ): ‘ಆಗಸ್ಟ್‌ 15ರ ಬಳಿಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ. ನಾನು ನುಡಿದ ಭವಿಷ್ಯ ನಿಜವಾಗಲಿದೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು.

ಹುಲಗಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಹಿಂದೆ ಹೇಳಿದ್ದೆ.

ಆ ಕಾಲ ಈಗ ಸನ್ನಿಹಿತವಾಗಿದೆ’ ಎಂದರು.

‘ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಕಾರ್ಯಕ್ರಮದ ಬಳಿಕ ಕಾಂಗ್ರೆಸ್‌ ಮೂರು ಹೋಳಾಗಲಿದೆ ಎಂದು ಅನೇಕರು ಮಾತನಾಡಿದ್ದರು. ಆದರೆ, ಪಕ್ಷಕ್ಕೆ ಈಗ ಮೂರು ಪಟ್ಟು ಶಕ್ತಿ ಬಂದಿದೆ. ಮುಂಬರುವ ಚುನಾವಣೆಯಲ್ಲಿ ಪಕ್ಷ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ’ ಎಂದರು.

‘ಚುನಾವಣೆ ಹತ್ತಿರ ಬಂದಾಗ ಬಿಜೆಪಿ ನಾಯಕರು ಪರಿಶಿಷ್ಟ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಗೆ ಪರಿಶಿಷ್ಟರ ಮತಗಳಷ್ಟೇ ಬೇಕು. ಚುನಾವಣೆ ಬಂದಾಗ ಈ ವಿಷಯ ತೇಲಿ ಬಿಟ್ಟು ಮತಬ್ಯಾಂಕ್‌ ರಾಜಕಾರಣ ಮಾಡುತ್ತದೆ’ ಎಂದು ಆರೋಪಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ