Breaking News

ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ತಮ್ಮನಿಗೆ ಮುಹೂರ್ತ, ಸುಪಾರಿ ಕೊಟ್ಟು ಕೊಲ್ಲಿಸಿದ ಅಕ್ಕಂದಿರು!

Spread the love

ಕಲಬುರಗಿ: ರಕ್ಷಾ ಬಂಧನ (Raksha Bandhan) ಇನ್ನೇನು ಹತ್ತಿರದಲ್ಲೇ ಇದೆ. ರಕ್ಷಾ ಬಂಧನ ಅಂದರೆ ಸಹೋದರ (Brother), ಸಹೋದರಿಯರ (Sister) ಬಾಂಧವ್ಯವನ್ನು (Relationship) ಸಾರುವ ಹಬ್ಬ (Festival) ಇದು.
ಸಹೋದರಿ ತನ್ನ ಸಹೋದರನಿಗೆ ರಾಖಿ (Rakhi) ಕಟ್ಟಿ, ಶುಭವಾಗಲಿ ಅಂತ ಹಾರೈಸುತ್ತಾಳೆ. ರಾಖಿ ಕಟ್ಟಿಸಿಕೊಂಡ ಸಹೋದರ ನಿನ್ನ ರಕ್ಷಣೆ ಮಾಡುತ್ತೇನೆ ಅಂತ ವಾಗ್ದಾನ ಮಾಡುತ್ತಾನೆ. ಆದರೆ ಕಲಬುರಗಿಯಲ್ಲಿ (Kalaburagi) ಇಂತಹ ಪವಿತ್ರವಾದ ಅಕ್ಕ, ತಮ್ಮನ ಸಂಬಂಧಕ್ಕೆ ಮಹಿಳೆಯರಿಬ್ಬರು ಮಸಿ ಎರಚಿದ್ದಾರೆ. ತನ್ನ ತಮ್ಮನನ್ನೇ ಸುಪಾರಿ (Supari) ಕೊಟ್ಟು ಕೊಲ್ಲಿಸಿದ್ದಾರೆ. ವಿಚಾರ ತಿಳಿದು ಇಡೀ ಕಲಬುರಗಿಗೆ ಕಲಬುರಗಿಯೇ ಬೆಚ್ಚಿ ಬಿದ್ದಿದೆ.

ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಕಳೆದ ತಿಂಗಳು ಜುಲೈ 29ರಂದು ಕಲಬುರಗಿ ನಗರದ ಹೊರವಲಯದ ಅಳಂದ ರಸ್ತೆಯ ಕೆರೆಭೋಸ್​ಗಾ ಕ್ರಾಸ್ ಬಳಿಯ ಜಮೀನೊಂದರ ಬಳಿ ಯುವಕನೋರ್ವ ಶವ ಬಿದ್ದಿತ್ತು. ಆತನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು, ನಂತರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಆತನನ್ನು ಬರ್ಬರವಾಗಿ ಕೊಂದಿದ್ದ ಹಂತಕರು, ಆತ ಪ್ರಾಣ ಬಿಡುತ್ತಲೇ ಅಲ್ಲಿಂದ ಎಸ್ಕೇಪ್ ಆಗಿದ್ದರು.

ಪೊಲೀಸರಿಂದ 6 ಮಂದಿ ಹಂತಕರ ಬಂಧನ

ಈ ಬಗ್ಗೆ ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಅವಿನಾಶ್, ಆಸಿಫ್, ರೋಹಿತ್, ಮೋಸಿನ್ ಹಾಗೂ ಅನಿತಾ, ಮೀನಾಕ್ಷಿ ಎಂಬ ಇಬ್ಬರು ಮಹಿಳೆಯರು ಸೇರಿ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್​ಡಿಕೆಗೆ ಪಾಟೀಲ್ ಪ್ರತಿಸವಾಲು

Spread the loveಗದಗ: ”ಗೋವಾದಲ್ಲಿ ನಿಮ್ಮದೇ ಮಿತ್ರಪಕ್ಷದ ಸರ್ಕಾರವಿದೆ. ಮಹದಾಯಿ ಯೋಜನೆಗೆ ಒಪ್ಪಿಗೆ ಕೊಡಿಸಿ. ಗೋವಾದ ಒಪ್ಪಿಗೆ ತೆಗೆದುಕೊಂಡು ಬನ್ನಿ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ