Breaking News
Home / ಜಿಲ್ಲೆ / ಬೆಳಗಾವಿ / ಅಭಿನವ ಕಾಡಸಿದ್ದೇಶ್ವರ ಸ್ವಾಮಿಜಿ ಕಾರು ಅಪಘಾತ

ಅಭಿನವ ಕಾಡಸಿದ್ದೇಶ್ವರ ಸ್ವಾಮಿಜಿ ಕಾರು ಅಪಘಾತ

Spread the love

ಬಾಗಲಕೋಟೆ: ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸ್ವಾಮೀಜಿ ಸೇರಿದಂತೆ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾ ಬಳಿ ಸ್ವಾಮೀಜಿ ಅವರ ಕಾರು ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಹಾಗೂ ಕಾರು ಚಾಲಕ ಸೇರಿದಂತೆ ಮೂವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣತಪ್ಪಿ ನೀಲಗಿರಿ ಮರಕ್ಕೆ ಡಿಕ್ಕಿ ಹೊಡೆದಿದೆ.

ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ವಾಮೀಜಿ ಸೇರಿದಂತೆ ಮೂರಿಗೂ ಗಾಯಗಳಾಗಿವೆ.


Spread the love

About Laxminews 24x7

Check Also

ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ದಂಪತಿ ಬಂಧನ

Spread the love ಬೆಳಗಾವಿ: ಹುಬ್ಬಳ್ಳಿಯ ನೇಹಾ ಹತ್ಯೆಯ ಪ್ರಕರಣದ ಪ್ರಮುಖ ಕೇಂದ್ರವಾಗಿರುವ ಸವದತ್ತಿ ತಾಲೂಕಿನ ಮುನವಳ್ಳಿ ಮತ್ತೊಂದು ಆಘಾತಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ