Breaking News

ನಳಿನ್‌ ಕುಮಾರ್‌ ಕಟೀಲ್‌ ನಿರ್ಗಮನ, ಕರ್ನಾಟಕ ಬಿಜೆಪಿಗೆ ಸಾರಥಿ ಯಾರು?

Spread the love

ಬೆಂಗಳೂರು, ಆಗಸ್ಟ್‌ 11: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುರ್ಚಿ ಅಲುಗಾಡುತ್ತಿರುವ ಬಗ್ಗೆ ಮಾತುಗಳು ಕೇಳಿಬರುತ್ತಿದೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ಬಗ್ಗೆ ಊಹಾಪೋಹಗಳು ಎದ್ದಿವೆ ಎಂದು ಮೂಲಗಳು ತಿಳಿಸಿವೆ.

 

ಬುಧವಾರ ಕರ್ನಾಟಕದ ಬಿಜೆಪಿ ನಾಯಕರು ನಳಿನ್ ಕುಮಾರ್ ಕಟೀಲ್ ಅವಧಿ ಮುಗಿದಾಗ ಆಗಸ್ಟ್ ಅಂತ್ಯದ ವೇಳೆಗೆ ಅಧಿಕಾರ ತ್ಯಜಿಸುತ್ತಾರೆ ಎಂದು ಸುಳಿವು ನೀಡಿದರು. ಆದಾಗ್ಯೂ ಕಟೀಲ್ ಮತ್ತು ಕೆಲವು ಬಿಜೆಪಿ ಪದಾಧಿಕಾರಿಗಳು ಆಗಸ್ಟ್ ಅಂತ್ಯದಲ್ಲಿ ಅವರು ನಿರ್ಗಮಿಸುವ ಸಾಧ್ಯತೆಯ ವರದಿಗಳನ್ನು ನಿರಾಕರಿಸಿದ್ದಾರೆ.

ಬಿಜೆಪಿಯಲ್ಲಿ ಈಗ ಮೂವರ ಹೆಸರು ರಾಜ್ಯಾಧ್ಯಕ್ಷರ ಹುದ್ದೆಗೆ ಜೋರಾಗಿ ಕೇಳಿ ಬರುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ. ಟಿ. ರವಿ ಹೆಸರು ಮುನ್ನಲೆಯಲ್ಲಿದ್ದರೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಅರವಿಂದ ಲಿಂಬಾವಳಿಯವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ