Breaking News

ಅನ್ನ ಭಾಗ್ಯಕ್ಕೆ ಕನ್ನ: ಅನರ್ಹರಿಂದ ₹11.91 ಕೋಟಿ ವಸೂಲಿ

Spread the love

ಬೆಂಗಳೂರು: ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್‌ ಪಡಿತರ ಚೀಟಿಯನ್ನು ಅಕ್ರಮವಾಗಿ ಪಡೆದು ಬಡವರ ‘ಅನ್ನ ಭಾಗ್ಯ’ಕ್ಕೆ ಕನ್ನ ಹಾಕಿದವರನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕುಗೊಳಿಸಿರುವ ಆಹಾರ ಇಲಾಖೆ, ಅಂಥವರಿಂದ ₹11.91 ಕೋಟಿ ದಂಡ ವಸೂಲಿ ಮಾಡಿದೆ.

 

2021ರ ಜ.30ರಿಂದ ಇದೇ ಜೂನ್‌ 30ರವರೆಗೆ ಈ ಕಾರ್ಯಾಚರಣೆ ನಡೆಸಿರುವ ಇಲಾಖೆ, ತಹಶೀಲ್ದಾರ್‌ಗಳ ಮೂಲಕ ನೋಟಿಸ್‌ ಜಾರಿ ಮಾಡಿ ಕ್ರಮ ತೆಗೆದುಕೊಂಡಿದೆ. ಅನರ್ಹರು ಹೊಂದಿದ್ದ ಒಟ್ಟು 3.17 ಲಕ್ಷ ಪಡಿತರ ಚೀಟಿಗಳನ್ನು ಈ ಅವಧಿಯಲ್ಲಿ ರದ್ದುಪಡಿಸಿದೆ. ಈ ಪೈಕಿ, ಕೆಲವು ಪಡಿತರ ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತಿಸಲಾಗಿದೆ.

ಬೆಳಗಾವಿ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಅನರ್ಹ ಪಡಿತರ ಚೀಟಿ ಹೊಂದಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಜಿಲ್ಲೆಗಳಲ್ಲಿ
₹1 ಕೋಟಿಗೂ ಹೆಚ್ಚು ದಂಡ ವಸೂಲಿ ಮಾಡಲಾಗಿದೆ.

ಈ ಮಧ್ಯೆ, ಸಾರಿಗೆ ಇಲಾಖೆಯ ನೆರವು ಪಡೆದು ನಾಲ್ಕು ಚಕ್ರದ ವೈಯಕ್ತಿಕ ವಾಹನ ಹೊಂದಿರುವ 12,584 ಎಎವೈ, ಬಿಪಿಎಲ್‌ ಪಡಿತರ ಚೀಟಿದಾರರನ್ನು ಗುರುತಿಸಿರುವ ಇಲಾಖೆ, ಅಂಥವರ ವಿರುದ್ಧವೂ ಕಾರ್ಯಾಚರಣೆ ಆರಂಭಿಸಿದೆ.

ಸರ್ಕಾರದ ಮಾನದಂಡಗಳ ಪ್ರಕಾರ, ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, 3 ಹೆಕ್ಟೇರ್‌ಗಿಂತ ಹೆಚ್ಚು ಜಮೀನು ಹೊಂದಿದವರು, ₹1.20 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿದವರು ಮತ್ತು ನಾಲ್ಕು ಚಕ್ರದ ವೈಯಕ್ತಿಕ ವಾಹನ ಇರುವವರು ಎಎವೈ ಅಥವಾ ಬಿಪಿಎಲ್‌ ಪಡಿತರ ಚೀಟಿ ಪಡೆಯಲು ಅರ್ಹರಲ್ಲ. ಈ ನಿಯಮಗಳನ್ನು ಉಲ್ಲಂಘಿಸಿ ಈ ಪಡಿತರ ಚೀಟಿ ಹೊಂದಿದವರನ್ನು ‘ಅನರ್ಹರು’ ಎಂದು ಇಲಾಖೆ ಪಟ್ಟಿ ಮಾಡಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ