Breaking News

ಸ್ವಾತಂತ್ರ್ಯ ದಿನಾಚರಣೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಚಾಮರಾಜಪೇಟೆ ಮೈದಾನ

Spread the love

ಬೆಂಗಳೂರು: ಹಲವು ವಿವಾದಗಳ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಇಂದು ಬೆಳಿಗ್ಗೆ ಎಂಟು ಗಂಟೆಗೆ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿಲಾಯಿತು.

 

ಇದೇ ಪ್ರಥಮ ಬಾರಿಗೆ ಈ ಮೈದಾನದಲ್ಲಿ ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿಗಳಾದ ಡಾ.ಎಂ. ಜಿ. ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸದರಾದ ಪಿ.ಸಿ. ಮೋಹನ್, ಶಾಸಕರಾದ ಜಮೀರ್ ಅಹಮ್ಮದ್, ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತ ಲಕ್ಮಣ ಲಿಂಬರಗಿ ಉಪಸ್ಥಿತರಿದ್ದರು.

 

ಧ್ವಜಾರೋಹಣ ನಂತರ ರಾಷ್ಟ್ರ ಗೀತೆ ಮೊಳಗಿದುದು ನೆರೆದಿದ್ದ ಸ್ಥಳೀಯ ಸಾರ್ವಜನಿಕರು ಪುಳಕಿತರಾದರು. ರಾಷ್ಟ್ರ ಗೀತೆ ನಂತರ ಬೊಲೊ ಭಾರತ್ ಮಾತಾಕಿ ಜೈ ಘೋಷಣೆ ಮುಗಿಲು ಮುಟ್ಟಿತು. ಧ್ವಜಾರೋಹಣ ಅತ್ಯಂತ ಶಾಂತಿಯುತವಾಗಿ ನೆರವೇರಿತು. ಐತಿಹಾಸಿಕ ಧ್ವಜಾರೋಹಣಕ್ಕೆ ಚಾಮರಾಜಪೇಟೆಯ ಸಾರ್ವಜನಿಕರು ಸಾಕ್ಷಿಯಾದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ