Breaking News

ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡಿ, ಇಲ್ಲದಿದ್ರೆ ಆಕ್ರೋಶ ಎದುರಿಸಿ: ಜಯಮೃತ್ಯುಂಜಯಶ್ರೀ

Spread the love

ಸಾಗರ: ರಾಜ್ಯ ಸರ್ಕಾರ ಪಂಚಮಸಾಲಿ-ಗೌಡ ಲಿಂಗಾಯಿತ, ಮಲೇಗೌಡ ದೀಕ್ಷಾ ಲಿಂಗಾಯಿತ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಮತ್ತು ಕೇಂದ್ರ ಸರ್ಕಾರ ಲಿಂಗಾಯಿತರಿಗೆ ಓಬಿಸಿ ಮೀಸಲಾತಿ ನೀಡದೆ ಹೋದಲ್ಲಿ ವೀರಶೈವ ಲಿಂಗಾಯಿತ ಸಮುದಾಯದ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮಿಗಳು ತಿಳಿಸಿದರು.

 

ತಾಲೂಕಿನ ಕೆಳದಿಯಲ್ಲಿ ಮಂಗಳವಾರ ಅಖಿಲ ಭಾರತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪೀಠದ ವತಿಯಿಂದ ರಾಣಿ ಚೆನ್ನಮ್ಮಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಮಲೆನಾಡು ಭಾಗದಲ್ಲಿ ಹಮ್ಮಿಕೊಂಡಿದ್ದ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶ್ರೀಗಳು ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸತತ ಮೂರು ಬಾರಿ ನೀಡಿದ ಭರವಸೆ ಹುಸಿಯಾಗಿದ್ದು, ಈ ತಿಂಗಳ 23ಕ್ಕೆ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಈ ಬಾರಿಯೂ ಮಾತು ಮುರಿದರೆ ಸಮುದಾಯ ತನ್ನ ಆಕ್ರೋಶವನ್ನು ಯಾವ ರೀತಿ ವ್ಯಕ್ತಪಡಿಸುತ್ತದೆ ಎಂದು ಗೊತ್ತಿಲ್ಲ. ಸರ್ಕಾರ ಅದಕ್ಕೆ ಅವಕಾಶ ನೀಡದೆ ಮೀಸಲಾತಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಭಾರೀ ಮಳೆಗೆ ನೆಲಕ್ಕೆ ಬಿದ್ದ ವಿದ್ಯುತ್‌ ತಂತಿಯಿಂದ ಶಾಕ್‌ – 8 ವರ್ಷದ ಬಾಲಕ ಸಾವು

Spread the loveಬೀದರ್: ಧಾರಾಕಾರ ಮಳೆಗೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೀದರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ