Breaking News

ಸ್ವಾತಂತ್ರ್ಯೋತ್ಸವದ ದಿನ ಜೇಬಿನಲ್ಲಿ ಚಾಕು ಯಾಕಿತ್ತು?, ಧ್ವಜ ಇರಬೇಕಿತ್ತು: ಪ್ರಮೋದ ಮುತಾಲಿಕ್

Spread the love

ಧಾರವಾಡ: ಶಿವಮೊಗ್ಗದಲ್ಲಿ ಸೋಮವಾರ ನಡೆದ ಗಲಾಟೆ ಆಕಸ್ಮಿಕವಾದದ್ದಲ್ಲ. ಮುಂಬರುವ ಗಣೇಶ ಮೆರವಣಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪೂರ್ವನಿಯೋಜಿತವಾಗಿ ಈ ಕೃತ್ಯ ನಡೆದಿದೆ ಎಂದು ಪ್ರಮೋದ ಮುತಾಲಿಕ್ ದೂರಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 40 ವರ್ಷದಿಂದ ಹಿಂದೂ ಮಹಾಸಭಾದ ಗಣೇಶ ಮೆರವಣಿಗೆ ಆಗುತ್ತದೆ. ಈ ಹಿಂದೆ ಗಣೇಶ ಮೆರವಣಿಗೆ ಮಸೀದಿ ಮುಂದೆ ಹೋಗಬಾರದೆಂದು ಗಲಾಟೆ ಮಾಡಿದ್ದರು. ಆಗಿನಿಂದಲೇ ಸಂಘರ್ಷ ಆರಂಭವಾಗಿದೆ ಎಂದರು.

ಸಾವರ್ಕರ್​ ಓರ್ವ ಪ್ರಖರ ಹಿಂದೂವಾದಿ ಮತ್ತು ರಾಷ್ಟ್ರೀಯವಾದಿ. ಅವರನ್ನು ವಿರೋಧಿಸುವುದು ಸೊಕ್ಕಿನ ನಡೆ. ಈ ವಿರೋಧ ಶುರು ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್‌ಗೆ ನೆಹರೂ, ಇಂದಿರಾ ಗಾಂಧಿ, ಸೋನಿಯಾ, ರಾಹುಲ್ ಮಾತ್ರ ಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಬೇಕಿಲ್ಲ ಎಂದು ಹರಿಹಾಯ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ