Breaking News

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ: ನಲಪಾಡ್ ವಿವಾದಾತ್ಮಕ ಹೇಳಿಕೆ

Spread the love

ಬೆಂಗಳೂರು : ”ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ, ನಾವು ಕಾಂಗ್ರೆಸ್ ಪಕ್ಷದವರು, ಗಾಂಧೀಜಿ ತತ್ವ ಅನುಸರಿಸುತ್ತಿರುವವರು” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

 

ಫೇಸ್ ಬುಕ್ ಲೈವ್ ನಲ್ಲಿಸಿದ್ದರಾಮಯ್ಯ ಅವರತ್ತ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನಲಪಾಡ್, ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡುತ್ತೇವೆ. ರಾಜ್ಯದ ಎಲ್ಲೆಡೆ ಪ್ರತಿಭಟನೆ ಮಾಡುತ್ತೇವಾ. ಎಲ್ಲಾ ಸಚಿವರಿಗೂ ಮೊಟ್ಟೆ ಕಳುಹಿಸಿ ಕೊಡುತ್ತೇವೆ. ನಾವು ಗಾಂಧೀಜಿ ಅವರ ಅಹಿಂಸಾ ತತ್ವದಿಂದ ಸೋಲಿಸುತ್ತೇವೆ ಎಂದು ಕಿಡಿ ಕಾರಿದ್ದಾರೆ.

ಆರ್ ಎಸ್ ಎಸ್ ನವರ ಜೀವಮಾನ, ಇತಿಹಾಸ, ಕ್ಷಮಾಪಣೆ ಕೇಳಿ ಬಂದವರು ಎಂದಿದ್ದಾರೆ.

ಮೊಟ್ಟೆ ಎಸೆದರೆ ನಾವು, ಸಿದ್ದರಾಮಯ್ಯ ಹೆದರುವುದಿಲ್ಲ,ನಮ್ಮ ಹೋರಾಟ ಉಗ್ರ ಆಗುವ ಮುನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಕ್ಷಮಾಪಣೆ ಕೇಳಬೇಕು ಎಂದಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜೊಲ್ಲೆ ವಿರುದ್ಧ ಮೊಟ್ಟೆ ಖರೀದಿಯಲ್ಲಿ ಕಿಕ್‌ಬ್ಯಾಕ್ ಪಡೆದ ಆರೋಪ ಕೇಳಿಬಂದಿತ್ತು, ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ಹಲವು ಸಂಘಟನೆಗಳು ಆಗ್ರಹಿಸಿದ್ದವು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ