Breaking News

ಗಣೇಶ ಮಂಟಪದಲ್ಲಿಬಿಜೆಪಿಯವರು ಸಾವರ್ಕರ್‌ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’

Spread the love

ಬೆಳಗಾವಿ: ‘ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮಂಟಪದಲ್ಲಿ ಬಿಜೆಪಿಯವರು ಸಾವರ್ಕರ್‌ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

 

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಜಾತಿಯವರೂ ಗಣೇಶನ ವಿಗ್ರಹ ಪ್ರತಿಷ್ಠಾಪಿಸುತ್ತಾರೆ. ಆದರೆ, ಧಾರ್ಮಿಕ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಬಿಜೆಪಿಯವರು ರಾಜಕಾರಣ ಮಾಡಲು ಮುಂದಾದರೆ, ನಾವೂ ಮಾಡಬೇಕಿರುವುದು ಅನಿವಾರ್ಯ. ಹಾಗಾಗಿ ಅಂಬೇಡ್ಕರ್, ಬಸವಣ್ಣನವರ ಭಾವಚಿತ್ರ ಅಳವಡಿಸುತ್ತೇವೆ. ಕೆಲವರು ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹಾಕಲಿದ್ದಾರೆ’ ಎಂದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ