Breaking News

ಗಣೇಶ ಮಂಟಪದಲ್ಲಿಬಿಜೆಪಿಯವರು ಸಾವರ್ಕರ್‌ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’

Spread the love

ಬೆಳಗಾವಿ: ‘ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮಂಟಪದಲ್ಲಿ ಬಿಜೆಪಿಯವರು ಸಾವರ್ಕರ್‌ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

 

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಜಾತಿಯವರೂ ಗಣೇಶನ ವಿಗ್ರಹ ಪ್ರತಿಷ್ಠಾಪಿಸುತ್ತಾರೆ. ಆದರೆ, ಧಾರ್ಮಿಕ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಬಿಜೆಪಿಯವರು ರಾಜಕಾರಣ ಮಾಡಲು ಮುಂದಾದರೆ, ನಾವೂ ಮಾಡಬೇಕಿರುವುದು ಅನಿವಾರ್ಯ. ಹಾಗಾಗಿ ಅಂಬೇಡ್ಕರ್, ಬಸವಣ್ಣನವರ ಭಾವಚಿತ್ರ ಅಳವಡಿಸುತ್ತೇವೆ. ಕೆಲವರು ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹಾಕಲಿದ್ದಾರೆ’ ಎಂದರು.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ