Breaking News

‘ಭಾರತ್ ಜೋಡೋ’ ಬದಲು, ‘ಕಾಂಗ್ರೆಸ್​ ಜೋಡೋ’ ಯಾತ್ರೆ ಮಾಡಿ -ರಾಹುಲ್​ಗೆ ಆಜಾದ್ ಕಿವಿ ಮಾತು

Spread the love

ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿನ ನಡೆಗಳ ಬಗ್ಗೆ ತುಂಬಾ ದಿನಗಳ ಹಿಂದೆಯೇ ಕೋಪಿಸಿಕೊಂಡಿದ್ದ ಆಜಾದ್, ಇಂದು ಪಕ್ಷದ ಎಲ್ಲಾ ಸ್ಥಾನ-ಮಾನಗಳಿಗೂ ರಾಜೀನಾಮೆ ಘೋಷಿಸಿದ್ದಾರೆ. ರಾಜೀನಾಮೆ ನೀಡಿ ಹಂಗಾಮಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿಗೆ 4 ಪುಟಗಳ ಸುದೀರ್ಘ ಪತ್ರವನ್ನ ಬರೆದು, ರಾಹುಲ್ ಗಾಂಧಿ ವಿರುದ್ಧ ನೇರ ಅಸಮಾಧಾನ ಹೊರಹಾಕಿದ್ದಾರೆ.

ರಾಹುಲ್ ಬಾಲೀಶ ವರ್ತನೆಗೆ ಕಿಡಿ
ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಬಾಲೀಶ ವರ್ತನೆ ಮಾಡುತ್ತಾರೆ ಎಂದು ಆಜಾದ್ ಆರೋಪಿಸಿದ್ದಾರೆ. 2014ರ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್​ ‘ಬಿಕ್ಕಟ್ಟಿನ ಪರಿಸ್ಥಿತಿ’ಗೆ ರಾಹುಲ್ ಗಾಂಧಿಯೇ ನೇರ ಕಾರಣ. 2013ರ ಜನವರಿಯಲ್ಲಿ ರಾಹುಲ್ ಗಾಂಧಿಯನ್ನ ನೀವು ಕಾಂಗ್ರೆಸ್ ಉಪಾಧ್ಯಕ್ಷರನ್ನಾಗಿ ಮಾಡಿದ್ದೀರಿ. ಅವರು ಪಕ್ಷದಲ್ಲಿನ ಸಮಾಲೋಚನೆಯ ವ್ಯವಸ್ಥೆಯನ್ನು ಕೊನೆಗೊಳಿಸಿದರು. ಎಲ್ಲಾ ಹಿರಿಯ, ಅನುಭವಿ ನಾಯಕರನ್ನು ಬದಿಗೊತ್ತಿ, ಅನುಭವವೇ ಇಲ್ಲದವರು ಪಕ್ಷವನ್ನು ನಡೆಸತೊಡಗಿದರು.


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ