Breaking News

ಡಿಸೆಂಬರ್ ತಿಂಗಳಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಅನಾವರಣ

Spread the love

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ತಿಂಗಳಲ್ಲಿ “ಸ್ಟ್ಯಾಚು ಆಫ್ ಪ್ರಾಸ್ಪರಿಟಿ” (ಪ್ರಗತಿ ಪ್ರತಿಮೆ) ಅನಾವರಣಗೊಳ್ಳುವ ಸಾಧ್ಯತೆಯಿದೆ.

 

ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ಕೇಂದ್ರವಾಗಿಸುವ ರೀತಿ ಕೆಂಪೇಗೌಡ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರಕಾರ ಯೋಜನೆ ರೂಪಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಇಂದು 45 ದಿನಗಳ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣಗೊಳ್ಳುತ್ತಿದೆ. ಅಮೆರಿಕಾದ ಸ್ವಾತಂತ್ರ್ಯ ಪ್ರತಿಮೆ (ಸ್ಟ್ಯಾಚು ಆಫ್ ಲಿಬರ್ಟಿ), ಗುಜರಾತಿನ ಏಕತಾ ಪ್ರತಿಮೆ ಸಾಲಿಗೆ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಸೇರಿಸುವುದಕ್ಕೆ ರಾಜ್ಯ ಸರಕಾರ ಯೋಚಿಸಿದ್ದು, ಇದಕ್ಕೆ ಸ್ಟ್ಯಾಚು ಆಫ್ ಪ್ರಾಸ್ಪರಿಟಿ ಎಂದು ನಾಮಕರಣ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ