Breaking News

ಚೌತಿ ಮೆರವಣಿಗೆ ವೇಳೆ ಮಸೀದಿ ಆವರಣಕ್ಕೆ ಬಣ್ಣ ಎರಚಿದ ಯೋಧ; ಸೈನಿಕನ ಬಂಧನ, ಪ್ರಕರಣ ದಾಖಲು..

Spread the love

ಬಾಗಲಕೋಟೆ: ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣೆಗೆ ಸಂದರ್ಭದಲ್ಲಿ ಯೋಧನೊಬ್ಬ ಮಸೀದಿಯೊಂದರ ಆವರಣಕ್ಕೆ ಬಣ್ಣ ಎರಚಿದ್ದು, ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

 

ಆನಂದ ಕುದುರಿಕಾರ ಬಂಧಿತ ಯೋಧ. ಈತ ಮರಾಠಾ ಲೈನ್ ಇನ್​ಫ್ಯಾಂಟ್ರಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಊರಿಗೆ ಬಂದಿದ್ದಾಗ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಕೋಟೆ ಪೊಲೀಸರು ಸೈನಿಕನನ್ನು ಬಂಧಿಸಿದ್ದಾರೆ.

ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಲುವಾಗಿ ನಿನ್ನೆ ಈ ಮೆರವಣಿಗೆ ನಡೆದಿದ್ದು, ಯೋಧ ಆನಂದ ಕೂಡ ಪಾಲ್ಗೊಂಡಿದ್ದ. ಈ ಸಂದರ್ಭದಲ್ಲಿ ಬಾಗಲಕೋಟೆ ಪಂಕಾ ಮಸೀದಿ ಆವರಣಕ್ಕೆ ಬಣ್ಣ ಎರಚಿದ್ದ.


Spread the love

About Laxminews 24x7

Check Also

ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!!

Spread the love ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ