Breaking News

ಡಾ. ಅಂಬೇಡ್ಕರ್ ರೂಪದ ಗಣೇಶ ಮೂರ್ತಿಗೆ ವಿರೋಧ

Spread the love

(ಕೊಪ್ಪಳ ಜಿಲ್ಲೆ): ಗಂಗಾವತಿಯ ಅಂಬೇಡ್ಕರ್ ನಗರದಲ್ಲಿ ವಿನಾಯಕ ಸ್ನೇಹವೃಂದ ಯುವಕ ಮಂಡಳಿ ಪ್ರತಿಷ್ಠಾಪಿಸಿರುವ ಡಾ. ಅಂಬೇಡ್ಕರ್ ರೂಪದ ಗಣೇಶ ಮೂರ್ತಿಗೆ ದಲಿತ ಒಕ್ಕೂಟಗಳು ವಿರೋಧ ವ್ಯಕ್ತಪಡಿಸಿವೆ.

ಸಂಘಟಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗುರುವಾರ ಪೊಲೀಸ್ ಠಾಣೆ ಮೆಟ್ಟಿಲೇರಿವೆ.

 

‘ಅಂಬೇಡ್ಕರ್ ಅವರ ರೂಪ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು ಸರಿಯಲ್ಲ. ಇದರಿಂದ ಅವರ ಘನತೆಗೆ ಧಕ್ಕೆ ಉಂಟಾಗಿದೆ. ಮೂರ್ತಿಯನ್ನು ಕೊನೆಯದಾಗಿ ನೀರಿಗೆ ವಿಸರ್ಜನೆ ಮಾಡಲಾಗುತ್ತದೆ. ಇದು ಸಂವಿಧಾನ ಶಿಲ್ಪಿಗೆ ಮಾಡಿದ ಅವಮಾನ’ ಎಂದು ಒಕ್ಕೂಟದ ಮುಖಂಡರಾದ ಕುಂಟೋಜಿ ಮರಿಯಪ್ಪ ಹೇಳಿದರು.

ಸದಸ್ಯರಾದ ದೊಡ್ಡ ಬೋಜಪ್ಪ, ಸಿ.ಕೆ.ಮರಿಸ್ವಾಮಿ, ಹನುಮಂತಪ್ಪ, ಪೂಜಾರಿ ಬಸವರಾಜ, ಹಂಚಿನಾಳ ಹುಸೇನಪ್ಪ, ಮಾಗಿ ಹುಲಗಪ್ಪ, ಕಂಟ್ಯಪ್ಪ, ರವಿ ಆರತಿ , ಸಣ್ಣ ಬೋಜಪ್ಪ ಇದ್ದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ