ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ ಮಾಡಿದ್ದಾರೆ. ಆರೋಪಿಗಳು ಪರಾರಿಯಾಗಿರುವ ಘಟನೆ ಜೋಯ್ಡಾ ತಾಲೂಕಿನ ಉಸೋಡ ಬಳಿ ನಡೆದಿದೆ.
ಹೌದು GA 07 C 9384 ನಂಬರಿನ ಸಫಾರಿ ವಾಹನದಲ್ಲಿ ಅಕ್ರಮವಾಗಿ ಸಾಗವಾನಿ ಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ವೇಳೆ ಆರೋಪಿಗಳು ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದಾರೆ. ಆರೋಪಿಗಳಿಗಾಗಿ ಅರಣ್ಯ ಇಲಾಖೆ ಶೋಧ ನಡೆಸುತ್ತಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ.ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ನಡೆದ .
ಈ ಕಾರ್ಯಾಚರಣೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ನಿಂಗಾಣಿ, ಅಪ್ಪಾರಾವ್ ಕಲಶೆಟ್ಟಿ, ಅನಿಲ್ ಆಚರಟ್ಟಿ, ಸಂದೀಪ್ ನಾಯ್ಕ್ ಸೇರಿ ಇನ್ನಿತರರು ಭಾಗಿಯಾಗಿದ್ದರು.
Laxmi News 24×7