Breaking News

ಮುರುಘಾ ಶ್ರೀ ಬಂಧನ: ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

Spread the love

ಬೆಂಗಳೂರು: ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ ಬೃಹನ್ ಮಠದ ಮುರುಘಾ ಶರಣರು ಬಂಧನಕ್ಕೆ ಒಳಗಾಗಿರುವುದು ರಾಜಕೀಯವಾಗಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

 

ರಾಜ್ಯ ರಾಜಕೀಯದ ಮೇಲೆ ತಲತಲಾಂತರದಿಂದ ಮುರುಘಾ ಮಠ ತನ್ನದೇ ಆದ ಪ್ರಭಾವ ಹೊಂದಿದೆ. ಬಹುಸಂಖ್ಯಾತ ವೀರಶೈವ- ಲಿಂಗಾಯತರ ಶ್ರದ್ಧಾಕೇಂದ್ರವಾಗಿರುವುದರಿಂದ ಈ ಪ್ರಕರಣ ಮುಂದಿನ ಚುನಾವಣಾ ದೃಷ್ಟಿಯಿಂದಲೂ ಮಹತ್ವ ಪಡೆದಿದೆ. ಹೀಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಪ್ರಕರಣ ಸಂಬಂಧ ಅಕ್ಷರಶಃ ಮೌನಕ್ಕೆ ಶರಣಾಗಿದ್ದಾರೆ. ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿಯವರನ್ನು ಶಿವಕುಮಾರ್ ಮುರುಘಾ ಮಠಕ್ಕೆ ಕರೆದೊಯ್ದು ಇಷ್ಟ ಲಿಂಗ ದೀಕ್ಷೆ ಕೊಡಿಸಿದ ಬಳಿಕ ಈ ಮಠದ ಜತೆಗೆ ಕಾಂಗ್ರೆಸ್ ಸಂಬಂಧ ಇನ್ನಷ್ಟು ಗಾಢವಾಗಿತ್ತು.

ಆದರೆ ಶ್ರೀಗಳಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಕ್ಕಳು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದಲಿತ ಪರ ಸಂಘಟನೆಗಳು ಈಗಾಗಲೇ ಪ್ರತಿಭಟನೆ ನಡೆಸಿದ್ದು, ಕ್ರಮಕ್ಕೆ ಆಗ್ರಹಿಸಿವೆ.

 

ಇನ್ನೊಂದೆಡೆ ಸಿದ್ದರಾಮಯ್ಯ ಅವರ ಪ್ರತಿ ನಡೆಯನ್ನೂ ಬೆಂಬಲಿಸುವ ನಾಡಿನ ಪ್ರಗತಿಪರರ ಒಂದು ವರ್ಗ ವಿದ್ಯಾರ್ಥಿನಿಯರ ಪರ ನಿಂತಿದೆ. ಹೀಗಾಗಿ ಈ ಪ್ರಕರಣ ಕಾಂಗ್ರೆಸ್ ಗಿಂತಲೂ ಹೆಚ್ಚಾಗಿ ಸಿದ್ದರಾಮಯ್ಯ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ