Breaking News

ಬೆಂಗಳೂರಲ್ಲಿ ಬಸ್ ಚಾಲಕನ ಮೇಲೆ ಟ್ರಾಫಿಕ್ ಸಿಬ್ಬಂದಿ ಹಲ್ಲೆ: ದೂರು ದಾಖಲು

Spread the love

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್ ಚಾಲಕನ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ ನಡೆಸಿರುವ ಪ್ರಕರಣ ಶನಿವಾರ ತಡರಾತ್ರಿ ನಗರದ ಕಾರ್ಪೊರೇಷನ್ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.

ರಾತ್ರಿ 11 ಗಂಟೆ ಸುಮಾರಿಗೆ ಕಾರ್ಪೊರೇಷನ್ ಬಳಿ ಸಾಗರದಿಂದ ತಿರುವಣ್ಣಾಮಲೈಗೆ ಹೋಗುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಡ್ರೈವರ್ ಪ್ರಕಾಶ್, ಟಿಕೆಟ್ ಕಾಯ್ದಿರಿಸಿದ್ದ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಕಾರ್ಪೋರೇಷನ್ ಬಳಿ ಬಸ್ ನಿಲ್ಲಿಸಿದ್ದರು. ಈ ವೇಳೆ ಹಿಂದೆ ಎರಡು ಮೂರು ಬಸ್​​ಗಳು ಬಂದು ನಿಂತಿವೆ. ಕೂಡಲೇ ಬಸ್ ತೆರವುಗೊಳಿಸುವಂತೆ ಟ್ರಾಫಿಕ್ ಸಿಬ್ಬಂದಿ ಆವಾಜ್ ಹಾಕಿದ್ದಾರೆ. ಆದರೆ ಪ್ರಯಾಣಿಕರನ್ನು ಇನ್ನೂ ಬಸ್ ಹತ್ತದ ಕಾರಣ ನಿಲ್ದಾಣದಿಂದ ಚಾಲಕ ಬಸ್ ತೆಗೆದಿರಲಿಲ್ಲ.

ಆಗ ಟ್ರಾಫಿಕ್ ಪೊಲೀಸರು, ಡ್ರೈವಿಂಗ್ ಸೀಟ್ ಮೇಲೆ ಕುಳಿತಿದ್ದ ಡ್ರೈವರ್ ಪ್ರಕಾಶ್ ಮೇಲೆ ಏಕಾಏಕಿ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಲ್ಲೆ ನಡೆದ ಪರಿಣಾಮ ಡ್ರೈವರ್ ಪ್ರಕಾಶ್ ಮೂಗಿಗೆ ಗಂಭೀರ ಗಾಯವಾಗಿದೆ. ಪ್ರಕರಣದ ಸಂಬಂಧ ಚಾಲಕ ಪ್ರಕಾಶ್ ಎಸ್.ಜೆ ಪಾರ್ಕ್ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ