Breaking News

ಬೆಂಗಳೂರಿನಲ್ಲಿ ಮಳೆಯ ಅವಾಂತರಕ್ಕೆ ಹಲವಾರು ರಸ್ತೆಗಳು ಜಲಾವೃತ

Spread the love

ಬೆಂಗಳೂರು: ಟ್ರಾಫಿಕ್ ಜಾಮ್ ಉಂಟಾದಾಗ ಸಂಚಾರಿ ಪೊಲೀಸರು ವಾಹನ ದಟ್ಟಣೆಯಾಗಿರುವ ಮಾರ್ಗದಲ್ಲಿ ಸಂಚಾರಿಸಬೇಡಿ ಎಂದು ಹೇಳುವುದು ಸರ್ವೇಸಾಮಾನ್ಯ. ಇಲ್ಲಿಯೂ‌ ಸಹ ಟ್ರಾಫಿಕ್ ಪೊಲೀಸರು ಈ ಮಾರ್ಗಗಳಲ್ಲಿ ವಾಹನ ಚಲಾಯಿಸಬೇಡಿ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚಾರ ನಡೆಸಿ ಎಂದು ಮನವಿ ಮಾಡುತ್ತಿದ್ದಾರೆ. ಈ ಬಾರಿ ಮನವಿ‌‌ ಮಾಡುತ್ತಿರುವುದು ಟ್ರಾಫಿಕ್ ಜಾಮ್ ಕಾರಣಕ್ಕೆ ಅಲ್ಲ, ರಸ್ತೆಗಳು ಜಲಾವೃತ ಆಗಿದ್ದಕ್ಕಾಗಿ ಎನ್ನುತ್ತಿದ್ದಾರೆ.

ಕಳೆದ‌ ಒಂದು ವಾರದಿಂದ ಐಟಿ ಸಿಟಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ರಾಜಧಾನಿ ಥಂಡಾ ಹೊಡೆದಿದೆ. ಬಿಟ್ಟು ಬಿಡದೆ ಬರುತ್ತಿರುವ ಮಹಾಮಳೆಗೆ ನಗರದ ಪ್ರಮುಖ ರಸ್ತೆಗಳೆಲ್ಲ ಜಲಾವೃತವಾಗಿ ಕೋಡಿ ಒಡೆದ ಕೆರೆಯಂತಾಗಿವೆ. ಒಳಚರಂಡಿ ಹಾಗೂ ರಾಜಕಾಲುವೆಗಳು ತುಂಬಿ ಹರಿಯುತ್ತಿವೆ. ಐಟಿ-ಬಿಟಿ ಕಂಪನಿಗಳಿರುವ ಮಾರತ್​ಹಳ್ಳಿ, ಬೆಳ್ಳಂದೂರು ಸುತ್ತಮುತ್ತ ಮಳೆ ನೀರು ರಸ್ತೆಯಲ್ಲೇ ನಿಂತಿದೆ.

ಈ ಭಾಗದ ನಿವಾಸಿಗಳು ಹಾಗೂ‌ ಕೆಲಸ‌ಮಾಡುವ ಐಟಿ ಉದ್ಯೋಗಿಗಳ ಪಾಡು ಹೇಳತೀರದಾಗಿದೆ. ಸಾರ್ವಜನಿಕ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸುಗಮ ಸಂಚಾರಕ್ಕೆ ಮಳೆ ನೀರು‌ ಕಂಟಕವಾಗತೊಡಗಿದೆ. ಮುಂಜಾಗ್ರತ‌ ಕ್ರಮವಾಗಿ ಮಡಿವಾಳ ಸಂಚಾರಿ‌‌ ಪೊಲೀಸರು ಮೈಕ್ ಹಿಡಿದು ಈ ಭಾಗದ ರಸ್ತೆಗಳಿಗೆ ತೆರಳಬೇಡಿ ಎಂದು ವಾಹನ ಸವಾರರಿಗೆ ಮನವಿ ಮಾಡಿಕೊಳ್ಳುತ್ತಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ