Breaking News

ಶರಣಬಸವ ವಿವಿಯಿಂದ ಮಂಜಮ್ಮ ಜೋಗತಿ ಸೇರಿ ಐವರು ಗಣ್ಯರಿಗೆ ಗೌರವ ಡಾಕ್ಟರೇಟ್

Spread the love

ಕಲಬುರಗಿ: ನಗರದ ಪ್ರತಿಷ್ಠಿತ ಶರಣಬಸವ ವಿಶ್ವವಿದ್ಯಾಲಯದಿಂದ ಮಂಜಮ್ಮ‌ ಜೋಗತಿ ಸೇರಿ ಐವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ‌ ಮಾಡಲಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶರಣಬಸವಪ್ಪ ಅಪ್ಪ ತಿಳಿಸಿದರು.

ಹಿರಿಯ ವಿಜ್ಞಾನಿಗಳಾದ ಡಾ.ಕಿರಣ್ ಕುಮಾರ್, ಡಾ.ಸತೀಶ್ ರೆಡ್ಡಿ, ಸಾಮಾಜಿಕ ಕಾರ್ಯಕರ್ತೆ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಪದ್ಮಶ್ರೀ ಡಾ ಮಂಜಮ್ಮ ಜೋಗತಿ, ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕದ ಹರಿಹರದ ಶಿವಯೋಗಾಶ್ರಮದ ಶರಣಬಸವಲಿಂಗ ಶಿವಯೋಗಿಗಳಿಗೆ ಮತ್ತು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ದಿ.ಬಸವರಾಜಪ್ಪ ಅಪ್ಪ(ಮರಣೋತ್ತರ) ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ಕುಲಾಧಿಪತಿ ತಿಳಿಸಿದರು.

ವಿವಿಯ 3ನೇ ಮತ್ತು 4ನೇ ಘಟಿಕೋತ್ಸವ ಸಂದರ್ಭದಲ್ಲಿ‌ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಇದಲ್ಲದೆ ಹಿರಿಯ ಪ್ರಾಧ್ಯಾಪಕ ಡಾ.ಎಸ್.ಜಿ.ಡೊಳ್ಳೇಗೌಡರಿಗೆ ಡಿ.ಲಿಟ್ ಪ್ರಶಸ್ತಿ ಹಾಗೂ 2,382 ವಿದ್ಯಾರ್ಥಿಗಳಿಗೆ ಪದವಿ, 337 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸುವುದಾಗಿಯೂ ಅವರು ಮಾಹಿತಿ ನೀಡಿದರು.


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ