Breaking News

ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ಸಂಜೆ ಉಮೇಶ್‌ ಕತ್ತಿ ಅಂತ್ಯಸಂಸ್ಕಾರ

Spread the love

ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ಸಂಜೆ ಉಮೇಶ್‌ ಕತ್ತಿ ಅಂತ್ಯಸಂಸ್ಕಾರ

ಬೆಂಗಳೂರು: ಕಳೆದ ರಾತ್ರಿ ಬೆಂಗಳೂರಿನಲ್ಲಿ ನಿಧನರಾದ ಸಚಿವ ಉಮೇಶ್ ಕತ್ತಿ ಅವರ ಮೃತದೇಹದ ಅಂತಿಮ ಸಂಸ್ಕಾರ ಇಂದು ಸಂಜೆ ಬೆಳಗಾವಿಯ ಬೆಲ್ಲದ ಬಾಗೇವಾಡಿಯಲ್ಲಿ ನೆರವೇರಲಿದೆ. ಬೆಳಗಾವಿಯ ಶಿವಬಸವ ನಗರದಲ್ಲಿರುವ ಸಚಿವರ ಸ್ವಗೃಹ ಮತ್ತು ಬೆಳಗ್ಗೆ 10.30ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಮಧ್ಯಾಹ್ನ 12ಕ್ಕೆ ಸ್ವಗ್ರಾಮ ಬೆಲ್ಲದ ಬಾಗೇವಾಡಿಗೆ ಮೃತದೇಹವನ್ನು ರವಾನಿಸಲಿದ್ದು, ಸಂಜೆ ಕತ್ತಿ ಅವರ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ