Breaking News

ಕುಡಿದ ಮತ್ತಿನಲ್ಲಿ ಸ್ನೇಹಿತನಿಗೆ ಕತ್ತರಿಯಿಂದ ಚುಚ್ಚಿ, ಬಳಿಕ ಭಯಗೊಂಡು ಕಿಡಕಿಯಿಂದ ಹಾರಿದ ವ್ಯಕ್ತಿ.

Spread the love

ಬೆಂಗಳೂರು: ಸ್ನೇಹಿತನಿಗೆ ಕತ್ತರಿಯಿಂದ ಹೊಟ್ಟೆಗೆ ಚುಚ್ಚಿ ನಂತರ ಹೆದರಿಕೆಯಿಂದ ಎರಡನೇ‌ ಮಹಡಿಯ ಬಾಲ್ಕನಿಯ ಕಿಟಕಿಯಿಂದ ಹಾರಿ ಗಾಯಗೊಂಡಿರುವ ಘಟನೆ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿರುವುದು ಬೆಳಕಿಗೆ ಬಂದಿದೆ.

ನಾಗಾಲ್ಯಾಂಡ್ ಮೂಲದ ಹೇಕಾ ಹಲ್ಲೆಗೊಳಗಾದ ಯುವಕ. ಅವರ ರೂಮ್ ಮೇಟ್ ಆಗಿರುವ ರೋಹಿತ್ ಹಲ್ಲೆ ನಡೆಸಿ ಬಳಿಕ ಭಯದಿಂದ ಮೂರನೇ ಮಹಡಿಯಿಂದ ಬಿದ್ದು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ರೋಹಿತ್ ಹಾಗೂ ಹೇಕಾ ಸೇರಿದಂತೆ ಐವರು ಸ್ನೇಹಿತರು ಒಂದೇ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದರು‌. ಇವರೆಲ್ಲರೂ ಕೋರಮಂಗಲದ ರೆಸ್ಟೋರೆಂಟ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು.

ನಿನ್ನೆ ರಾತ್ರಿ ಐವರು ಕುಡಿದು ಪಾರ್ಟಿ ಮಾಡಿದ್ದಾರೆ. ಕುಡಿದ ಆಮಲಿನಲ್ಲಿ‌‌‌ ಕ್ಷುಲ್ಲಕ ಕಾರಣಕ್ಕಾಗಿ ರೋಹಿತ್ ಹಾಗೂ ಹೇಕಾ‌‌ ನಡುವೆ ಮಾತಿನ ವಾಗ್ವಾದ ನಡೆದಿದ್ದು, ಜಗಳ ತಾರಕಕ್ಕೇರಿದೆ. ಈ ವೇಳೆ‌‌‌‌ ರೋಹಿತ್, ಮೀಸೆ ಕಟ್ ಮಾಡುವ ಕತ್ತರಿಯಿಂದ ಹೇಕಾ ಪಕ್ಕೆಲುಬಿಗೆ ಚುಚ್ಚಿ ಹಲ್ಲೆ‌‌ ನಡೆಸಿದ್ದಾರೆ.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ