Breaking News

ಕೃಷಿ ಸಚಿವರು ಮಿಸ್ಸಿಂಗ್‌ ಗೋದಿಬಣ್ಣ, ಕಟ್ಟುಮಸ್ತಾದ ಮೈಕಟ್ಟು, ದಪ್ಪ ಮೀಸೆ : ʼಕೈʼ ಪ್ರಕಟಣೆ

Spread the love

ಬೆಂಗಳೂರು: ಬಿಜೆಪಿ ಸಚಿವರ ವಿರುದ್ಧ ʼಮಿಸಿಂಗ್‌ ಮಿನಿಸ್ಟರ್‌ʼ ಅಭಿಯಾನವನ್ನು ಕಾಂಗ್ರೆಸ್‌ ಪಡೆ ಮುಂದುವರೆಸಿದೆ. ಇಂದು ಕೃಷಿ ಸಚಿವರು ಕಾಣೆಯಾಗಿದ್ದಾರೆ. ಗೋದಿಬಣ್ಣ, ಕಟ್ಟುಮಸ್ತಾದ ಮೈಕಟ್ಟು ಎಂದು ಬಿ.ಸಿ.ಪಾಟೀಲ್‌ ಅವರ ಕಾಲೆಳೆದಿದ್ದಾರೆ.

 

ಕೃಷಿ ಸಚಿವರು ಕಾಣೆಯಾಗಿದ್ದಾರೆ. ಹೆಸರು:ಬಿ.ಸಿ.ಪಾಟೀಲ್‌, ಗೋದಿಬಣ್ಣ, ಕಟ್ಟುಮಸ್ತಾದ ಮೈಕಟ್ಟು, ದುಂಡುಮುಖ, ದಪ್ಪ ಮೀಸೆ. ವಯಸ್ಸು : 65. ಸಿನೆಮಾ ಪ್ರದರ್ಶನದಲ್ಲಿ ಕಾಣಿಸಿಕೊಂಡವರು ನಂತರ ಪತ್ತೆಯಾಗಿಲ್ಲ. ಹಲವು ತಿಂಗಳಿಂದ ಅತಿವೃಷ್ಟಿಯ ಸಂಕಷ್ಟದಲ್ಲಿರುವ ರಾಜ್ಯದ ರೈತರು ಸಚಿವರನ್ನು ಕಾಣದೆ ಆತಂಕಗೊಂಡಿದ್ದಾರೆ. ದಯಮಾಡಿ ಹುಡುಕಿಕೊಡಿ ಎಂದು ಟ್ಟೀಟ್‌ ಮಾಡುವ ಮೂಲಕ ಸಚಿವರ ವಿರುದ್ಧ ಹರಿಹಾಯ್ದಿದ್ದಾರೆ.

 

ಅಲ್ಲದೆ, ಕೇಂದ್ರ ತಂಡದ ವರದಿಯಂತೆ ರಾಜ್ಯದಲ್ಲಿ ಅತಿವೃಷ್ಟಿಯ ನಷ್ಟ ₹3000 ಕೋಟಿ. ವಾಸ್ತವದಲ್ಲಿ ಈ ಮೊತ್ತ ದೊಡ್ಡದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಅಸಲಿ ‘ಜನಸ್ಪಂದನೆ’ ಎಂದರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು, ವಿಶೇಷ ಪ್ಯಾಕೇಜ್ ಘೋಷಿಸುವುದು, ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಡ ಹಾಕುವುದು. ‘ಜನಸ್ಪಂದನೆ’ ಹೆಸರಲ್ಲಿ ಸಮಾವೇಶ ಮಾಡಿದರೆ ಜನರಿಗೆ ಸ್ಪಂದಿಸಿದಂತಾಗದು ಎಂದಿದ್ದಾರೆ.

 

 

ನಿನ್ನೆಯೂ ಸಹ ಸಚಿವರಾದ ಸುಧಾಕರ್‌, ಆರಗ ಜ್ಞಾನೇಂದ್ರ, ಬಿ.ಎ.ಬಸವರಾಜ, ಎಸ್‌.ಟಿ. ಸೋಮಶೇಖರ್‌, ಗೋಪಾಲಯ್ಯ, ಆರ್‌.ಅಶೋಕ್‌, ಸೋಮಣ್ಣ, ಮುನಿರತ್ನ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವಾರು ಶಾಸಕರು ಕಾಣೆಯಾಗಿದ್ದಾರೆ ಎಂದು ಕೆಪಿಸಿಸಿ ಟ್ಟೀಟ್‌ ಮಾಡಿತ್ತು.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ