Breaking News

ಅಪಘಾತವಾಗಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ತೋರಿದ ವಿಜಯ್ ಮೋರೆ

Spread the love

ಬೆಳಗಾವಿಯ ಮಚ್ಛೆಯ ಕೆಎಸ್‍ಆರ್‍ಪಿ ಗ್ರೌಂಡ್ ಬಳಿ ಅಪಘಾತಕ್ಕೀಡಾಗಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಸಮಾಜ ಸೇವಕ ಹಾಗೂ ಮಾಜಿ ಮಹಾಪೌರರಾದ ವಿಜಯ್ ಮೋರೆ ಹಾಗೂ ಮಾರಿಯಾ ಮೋರೆ ಮಾನವೀಯತೆ ಮೆರೆದಿದ್ದಾರೆ.

ಹೌದು ಇಂದು ಬೆಳಗಿನ ಜಾವ ಬೆಳಗಾವಿಯ ಮಚ್ಛೆಯ ಕೆಎಸ್‍ಆರ್‍ಪಿ ಗ್ರೌಂಡ್ ಬಳಿ ಯುವಕನೋರ್ವ ಅಪಘಾತಕ್ಕೀಡಾಗಿ ನರಳಾಡುತ್ತಿದ್ದ. ಈ ವೇಳೆ ಆತನ ಪರೀಸ್ಥಿತಿ ಗಂಭೀರವಾಗಿತ್ತು. ಈ ವೇಳೆ ಯಾರೂ ಆತನ ಸಹಾಯಕ್ಕಾಗಿ ಬರಲಿಲ್ಲ.

ಈ ವೇಳೆ ಮಾಜಿ ಮಹಾಪೌರ ಹಾಗೂ ಸಮಾಜ ಸೇವಕರಾದ ವಿಜಯ್ ಮೋರೆ ಹಾಗೂ ಮಾರಿಯಾ ಮೋರೆ ಅಪಘಾತಕ್ಕೀಡಾದ ವ್ಯಕ್ತಿಯ ಸಹಾಯಕ್ಕೆ ಧಾವಿಸಿದ್ದಾರೆ. ಆತನನ್ನು ವೇಣುಗ್ರಾಮ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಈ ವೇಳೆ ವೈದ್ಯರು, ನರ್ಸ್ ಹಾಗೂ ಯುವಕರು ಈ ವೇಳೆ ಮೋರೆ ರವರಿಗೆ ಸಹಾಯ ಮಾಡಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ