Breaking News

ಕ್ಯಾಮೆರಾ ಹಿಂದಿನ ಕಾಣದ ಕೈಗಳಿಗೆ ಗಿಫ್ಟ್ ಕೊಟ್ಟ ‘ರಾಬರ್ಟ್’

Spread the love

ಬೆಂಗಳೂರು: ಕ್ಯಾಮೆರಾ ಹಿಂದೆ ಕಾಣದ ಕೈಗಳಿಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರತಂಡದಿಂದ ಮೇಕಿಂಗ್ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ.

ಮೇ 1ರಂದು ಕಾರ್ಮಿಕರ ದಿನಾಚರಣೆಗೆ ಒಂದು ಸಾಂಗ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಅಂತಯೇ ಇಂದು ಮೇಕಿಂಗ್ ಸಾಂಗ್ ಬಿಡುಗಡೆ ಮಾಡಿದೆ. ಈ ವಿಚಾರವನ್ನು ದರ್ಶನ್ ಮತ್ತು ಚಿತ್ರದ ನಿರ್ದೇಶಕ ತರುಣ್ ಸುಧೀರ್ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ದರ್ಶನ್, ಸರ್ವರಿಗೂ ಕಾರ್ಮಿಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಕ್ಯಾಮೆರಾ ಹಿಂದೆ ಕೆಲಸ ಮಾಡುವ ಕಾಣದ ಕೈಗಳಿಗೆ ಈ ನಮ್ಮ ರಾಬರ್ಟ್ ಚಿತ್ರದ ಮೇಕಿಂಗ್ ವಿಡಿಯೋ ಅರ್ಪಣೆ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಹಾಡಿನ ಯೂಟ್ಯೂಬ್ ಲಿಂಕ್ ಅನ್ನು ಕೂಡ ಹಂಚಿಕೊಂಡಿದ್ದು, ಈ ಮೂಲಕ ಕಾರ್ಮಿಕರ ದಿನಾಚರಣೆಗೆ ತಮ್ಮ ಸಿನಿಮಾ ಕಾರ್ಮಿಕರಿಗೆ ಗಿಫ್ಟ್ ನೀಡಿದ್ದಾರೆ.

ಈ ಹಿಂದೆ ಟ್ವೀಟ್ ಮಾಡಿದ್ದ ನಿರ್ದೇಶಕ ತರುಣ್ ಸುಧೀರ್, ತೆರೆ ಮೇಲೆ ಸಿನಿಮಾವನ್ನು ಅದ್ಭುತವಾಗಿ ತರಲು ತಮ್ಮ ಜೀವವನ್ನೇ ಪಣವಾಗಿ ಇಡುವ ಸ್ಕ್ರೀನ್ ವಾರಿಯರ್ಸ್ ಗಾಗಿ ರಾಬರ್ಟ್ ಚಿತ್ರದಿಂದ ಚಿಕ್ಕ ವಿಡಿಯೋವೊಂದನ್ನು ಬಿಡುಗಡೆ ಮಾಡಲಿದ್ದೇವೆ. ರಾಬರ್ಟ್ ಚಿತ್ರದ ಈ ಮೇಕಿಂಗ್ ವಿಡಿಯೋ ಮೇ 1ರಂದು ಬೆಳಗ್ಗೆ 10.5ಕ್ಕೆ ಉಮಾಪತಿ ಫಿಲಂಮ್ಸ್ ಯೂಟ್ಯೂಬ್ ಚಾನಲ್‍ನಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದರು.

ಅಂತೆಯೇ ಇಂದು ಬೆಳಗ್ಗೆ ವಿಡಿಯೋ ರಿಲೀಸ್ ಆಗಿದ್ದು, ಇಂಟ್ರೆಸ್ಟಿಂಗ್ ಆಗಿ ಮೂಡಿಬಂದಿದೆ. ಸಾಂಗ್ ಶೂಟ್ ಮತ್ತು ಫೈಟಿಂಗ್ ಸೀನ್‍ಗಳ ಮೇಕಿಂಗ್ ವಿಡಿಯೋ ಇದಾಗಿದ್ದು, ತೆರೆಯ ಹಿಂದಿನ ರಿಯಲ್ ಸ್ಟಾರ್‍ಗಳನ್ನು ಮೇಕಿಂಗ್ ವಿಡಿಯೋದಲ್ಲಿ ಅನಾವರಣ ಮಾಡಿದ್ದಾರೆ. ಇದರಲ್ಲಿ ಒಂದು ದೃಶ್ಯವನ್ನು ಚಿತ್ರೀಕರಣ ಮಾಡಲು ಎಷ್ಟು ಜನ ಕಷ್ಟಪಡುತ್ತಾರೆ. ತೆರೆಯ ಹಿಂದೆ ಕೆಲಸಗಾರರ ಶ್ರಮ ಏನೂ ಎಂಬುದನ್ನು ತಿಳಿಸಲಾಗಿದೆ.

ಎಲ್ಲ ಅಂದುಕೊಂಡತೆ ಆಗಿದ್ದರೆ ಏಪ್ರಿಲ್ 4ರಂದೇ ರಾಬರ್ಟ್ ತೆರೆಮೇಲೆ ಬರಬೇಕಿತ್ತು. ಆದರೆ ಈ ಕೊರೊನಾ ಮಹಾಮಾರಿಯಿಂದ ದೇಶವೇ ಲಾಕ್‍ಡೌನ್ ಆದ ಕಾರಣ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದೆ. ಪರಿಸ್ಥಿತಿ ಸುಧಾರಿಸಿದ ನಂತರ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿದೆ. ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಇದಾಗಿದ್ದು, ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಆಶಾ ಭಟ್, ಜಗಪತಿ ಬಾಬು, ರವಿಶಂಕರ್, ಪ್ರಮುಖ ಮಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ