Breaking News

ವಿಕ್ರಮ ವಿಸಾಜಿ ಕೃತಿಗೆ ‘ಡಾ. ಗಿರಡ್ಡಿ ಪ್ರತಿಷ್ಠಾನ’ದ ಪ್ರಶಸ್ತಿ

Spread the love

ಧಾರವಾಡ: ಡಾ.ಗಿರಡ್ಡಿ ಗೋವಿಂದರಾಜ ಅವರ ಹೆಸರಿನಲ್ಲಿ, ನಗರದ ಗಿರಡ್ಡಿ ಗೋವಿಂದರಾಜ ಫೌಂಡೇಷನ್ ಪ್ರಸಕ್ತ ಸಾಲಿನಿಂದ ನೀಡುತ್ತಿರುವ ರಾಜ್ಯ ಮಟ್ಟದ ‘ಅತ್ಯುತ್ತಮ ವಿಮರ್ಶಾ ಕೃತಿ’ ಪ್ರಶಸ್ತಿಗೆ ಬೆಂಗ ಳೂರಿನ ಅಭಿನವ ಪ್ರಕಾಶನ ಪ್ರಕಟಿಸಿರುವ, ಕಲಬುರಗಿಯ ಡಾ.ವಿಕ್ರಮ ವಿಸಾಜಿ ಅವರ ‘ಪಠ್ಯದ ಭವಾವಳಿ’ ಕೃತಿ ಆಯ್ಕೆಯಾಗಿದೆ.

 

ಈ ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಇದು ಗಿರಡ್ಡಿ ಗೋವಿಂದರಾಜ ಫೌಂಡೇಷನ್ ವಿಮರ್ಶಾ ಕೃತಿಗೆ ನೀಡುತ್ತಿರುವ ಮೊದಲ ಪ್ರಶಸ್ತಿಯಾಗಿದೆ.

‘ಪ್ರಶಸ್ತಿಗಾಗಿ ರಾಜ್ಯದ ವಿವಿಧ ಭಾಗಗಳಿಂದ ಕೃತಿಗಳನ್ನು ಆಹ್ವಾನಿಸ ಲಾಗಿತ್ತು. ಡಾ.ರಾಜೇಂದ್ರ ಚೆನ್ನಿ, ಪ್ರೊ.ಟಿ.ಪಿ.ಅಶೋಕ ಮತ್ತು ಪ್ರೊ. ರಾಘವೇಂದ್ರ ಪಾಟೀಲ ಅವರಿದ್ದ ಆಯ್ಕೆ ಸಮಿತಿ ಡಾ.ವಿಕ್ರಮ ವಿಸಾಜಿ ಅವರ ವಿಮರ್ಶಾ ಕೃತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ’ ಎಂದು ಪ್ರತಿಷ್ಠಾನದ ಅಧ್ಯಕ್ಷ ವೆಂಕಟೇಶ ಮಾಚಕನೂರ ತಿಳಿಸಿದ್ದಾರೆ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ