Breaking News

ನಾರಾಯಣ ಗುರುಗಳಿಗೆ ಸಿಎಂ ಅಪಮಾನ: ಬೇಸರ ಹೊರ ಹಾಕುತ್ತಲೇ ಎಚ್ಚರಿಕೆ ಸಂದೇಶ ರವಾನಿಸಿದ ಪ್ರಣವಾನಂದ ಸ್ವಾಮೀಜಿ

Spread the love

ದಾವಣಗೆರೆ: ಶ್ರೀ ನಾರಾಯಣ ಗುರುಗಳ ಜಯಂತಿ ದಿನದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಡೆ ವಿರುದ್ಧ ಡಾ. ಪ್ರಣವಾನಂದ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.

ವಿಶ್ವಕ್ಕೆ ಸಮಾನತೆ ಸಾರಿರುವ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ದಿನದಂದು ನಾರಾಯಣ ಗುರುಗಳ ಭಾವಚಿತ್ರಕ್ಕೆ ಮುಖ್ಯಮಂತ್ರಿಗಳು ಪೂಜೆ ಸಲ್ಲಿಸಲಿಲ್ಲ.

ವಿಧಾನಸಭೆಯಲ್ಲಿ ಎಲ್ಲ ಶರಣರ ಭಾವಚಿತ್ರಕ್ಕೆ ಅವರ ಜಯಂತಿ ದಿನದಂದು ಪುಷ್ಪ ನಮನ ಸಲ್ಲಿಸಿ ಪೂಜೆ ಸಲ್ಲಿಸುವ ಪದ್ಧತಿ ನಡೆದು ಬಂದಿದೆ. ಆದರೆ, ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ನಡೆಸಬೇಕಿದ್ದ ಬಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತಿಯನ್ನು ಮಂಗಳೂರಿಗೆ ಸ್ಥಳಾಂತರಿಸುವ ಮೂಲಕ ಮುಖ್ಯಮಂತ್ರಿಗಳು ಗುರುಗಳಿಗೆ ಹಾಗೂ ಈಡಿಗ ಬಿಲ್ಲವ ನಾಮಧಾರಿ ಸಮುದಾಯಕ್ಕೆ ಅವಮಾನಿಸಿದ್ದಾರೆ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಶಕ್ತಿ ಪೀಠದ ಡಾ.ಪ್ರಣವಾನಂದ ಸ್ವಾಮೀಜಿ ಬೇಸರಿಸಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ