Breaking News

ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ ನಿರ್ಲಕ್ಷ್ಯ: ಸತೀಶ ಜಾರಕಿಹೊಳಿ

Spread the love

ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಪಾರ ಮಳೆಯಿಂದ ಜನತೆಗೆ ತೊಂದರೆ ಉಂಟಾಗುತ್ತಿದ್ದರೂ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಚಿವ ಗೋವಿಂದ ಕಾರಜೋಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಗೋಕಾಕ್‍ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಗಹೊಳಿ ಅವರು ಕಳೆದ ಭಾರೀ ಕೂಡ ಪ್ರವಾಹಕ್ಕೆ ಸರ್ಕಾರವಾಗಲಿ, ಸಚಿವರಾಗಲಿ ಜನತೆಗೆ ಸ್ಪಂದನೆ ನೀಡಲಿಲ್ಲ. ಈ ಭಾರಿಯೂ ಅದೇ ನಿರ್ಲಕ್ಷ್ಯ ಮುಂದುವರಿದಿದೆ.

ಕೆಲವು ಕಡೆ ಮಳೆಯಿಂದ ಮನೆಗಳು ಬಿದ್ದಿವೆ. ಕೆಲವರನ್ನು ಸ್ಥಳಾಂತರ ಮಾಡಲಾಗಿದ್ದು, ಇನ್ನುಳಿದವರನ್ನು ಹಾಗೆ ಬಿಡಲಾಗಿದೆ ಎಂದು ಆರೋಪಿಸಿದರು.ಯಮಕನಮರಡಿಯಲ್ಲಿ ನನ್ನನ್ನು ಟಾರ್ಗೆಟ್ ಮಾಡಿ ಪ್ರಯೋಜನವಿಲ್ಲ. ಜನ ಬೆಂಬಲ ನಮ್ಮ ಕಡೆ ಇದ್ದಾಗ ಬಿಜೆಪಿಯವರು ಏನು ಮಾಡಲು ಸಾಧ್ಯವಿಲ್ಲ. ಬಿಜೆಪಿಯವರು ಅಧಿಕಾರಕ್ಕಾಗಿ ಅನ್ಯ ಮಾರ್ಗದಲ್ಲಿ ಸಾಗುತ್ತಿದ್ದಾರೆ ಎಂದು ಇದೇ ವೇಳೆ ಸತೀಶ ಜಾರಕಿಹೊಳಿ ಟಾಂಗ್ ಕೊಟ್ಟರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ