Breaking News
Home / ರಾಜಕೀಯ / ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ” ತನಿಖಾ ತಿರುಗೇಟು” ನೀಡಿದ್ದಾರೆ.

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ” ತನಿಖಾ ತಿರುಗೇಟು” ನೀಡಿದ್ದಾರೆ.

Spread the love

ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ” ತನಿಖಾ ತಿರುಗೇಟು” ನೀಡಿದ್ದಾರೆ.

ಗಂಗಾ ಕಲ್ಯಾಣ ಯೋಜನೆಯಲ್ಲಿ 430 ಕೋಟಿ‌ ರೂ.ಅವ್ಯವಹಾರ ನಡೆದಿದೆ ಎಂದು ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ವಿಷಯ ಪ್ರಸ್ತಾಪಿಸಿದರು.

ಆದರೆ ಸರಕಾರ ಸಮರ್ಪಕ ಉತ್ತರ ನೀಡಿಲ್ಲ ಎಂದು ಶಾಸಕರಾದ ಪ್ರಿಯಾಂಕ ಖರ್ಗೆ ,ಯತೀಂದ್ರ ಸಿದ್ದರಾಮಯ್ಯ, ಪ್ರಸಾದ್ ಅಬ್ಬಯ್ಯ, ಭೀಮಾ ನಾಯಕ್ ಹಾಗೂ ಉಳಿದ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಕಲಾಪದ ಬಳಿಕ ಸಭೆ ನಡೆಸೋಣ ಎಂದರೂ ಪ್ರತಿಭಟನೆ ಹಿಂಪಡೆಯಲಿಲ್ಲ.

 

ಈ ವಿಚಾರವನ್ನು ಕಾಂಗ್ರೆಸ್ ಸದನದ ಹೊರಗೆ ಅಸ್ತ್ರವಾಗಿ ಬಳಸಬಹುದೆಂಬುದನ್ನು ಮನಗಂಡ ಸಿಎಂ ಬೊಮ್ಮಾಯಿ, ತಕ್ಷಣ ಈ ವಿಚಾರವನ್ನು ತನಿಖೆಗೆ ಒಪ್ಪಿಸುತ್ತೇನೆ. 2018 ರಿಂದ ಇಲ್ಲಿಯವರೆಗೆ ನಡೆದ ಎಲ್ಲ ಪ್ರಕರಣವನ್ನು ‌ತನಿಖೆಗೆ ಒಪ್ಪಿಸುತ್ತೇವೆ ಎಂದಾಗ ಕಾಂಗ್ರೆಸ್ ಪ್ರತಿಭಟನೆ ವಾಪಾಸ್ ಪಡೆಯಿತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ