Breaking News

ಕರೆಂಟ್ ಹೋದಾಗ ಮಶೀನ್‍ಗಳೆಲ್ಲ ಬಂದ್ ಆದವು ಕೆಲವೇ ಕ್ಷಣಗಳಲ್ಲಿ ನನ್ನ ಮಗ ಸತ್ತು ಹೋದ”: ಬಳ್ಳಾರಿ: ವಿಮ್ಸ್​ ತೀವ್ರ ನಿಗಾ ಘಟಕದಲ್ಲಿದ್ದ 8 ವರ್ಷದ ಬಾಲಕ ಸಾವು

Spread the love

ಬಳ್ಳಾರಿ: ವಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದ 8 ವರ್ಷದ ಬಾಲಕ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಿರುಗುಪ್ಪದ ಕೆ.ಮಹೇಶ್ ಹಾಗೂ ಈರಮ್ಮ ದಂಪತಿಯ ಪುತ್ರ ನಿಖಿಲ್ (8) ಮೃತ ಬಾಲಕ.

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಈತನನ್ನು ಸೆ.11ರಂದು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಬುಧವಾರ ಸರಣಿ ಸಾವು ಪ್ರಕರಣ ಹೊರ ಬೀಳುತ್ತಿದ್ದಂತೆಯೇ ಈ ವಿಚಾರ ಗುರುವಾರ ಸಂಜೆಯ ವೇಳೆಗೆ ಬಹಿರಂಗವಾಗಿದೆ.

“ನನ್ನ ಮಗನನ್ನು ಐಸಿಯುದಲ್ಲಿ ಅಡ್ಮಿಟ್ ಮಾಡಿದ್ದೆವು. ವೆಂಟಿಲೇಟರ್ ಮೇಲಿದ್ದ. ಆದರೆ ನಿನ್ನೆ ಬೆಳಿಗ್ಗೆ ಕರೆಂಟ್ ಹೋದಾಗ ಮಶೀನ್‍ಗಳೆಲ್ಲ ಬಂದ್ ಆದವು. ಯಾಕೆ ಹೀಗೆ ಎಂದು ಅಲ್ಲಿದ್ದ ಸಿಬ್ಬಂದಿಯನ್ನು ಕೇಳಿದೆವು. ಕರೆಂಟ್ ಹೋಗಿದೆ ಎಂದರು. ಕೆಲವೇ ಕ್ಷಣಗಳಲ್ಲಿ ನನ್ನ ಮಗ ಸತ್ತು ಹೋದ” ಎಂದು ತಾಯಿ ಈರಮ್ಮ ಹೇಳಿದರು.


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ