Breaking News

ವಿಮ್ಸ್ ಆಸ್ಪತ್ರೆ ದುರಂತ: ಮೃತ ಮೂವರು ರೋಗಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Spread the love

ಬಳ್ಳಾರಿ/ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸಾವನ್ನಪ್ಪಿರುವ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಸರ್ಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಕೆ.ಆರ್.ವೃತ್ತದ ಯುವಿಸಿಇಯಲ್ಲಿ ಆಯೋಜಿಸಿದ್ದ ವಿಶ್ವೇಶ್ವರಯ್ಯ ಇಂಜಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಲೋಕಾರ್ಪಣೆ ಹಾಗೂ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನೋತ್ಸವದ ನಿಮಿತ್ತ ನಡೆದ ಅಭಿಯಂತರರ ದಿನಾಚರಣೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು.

ಆಸ್ಪತ್ರೆಯಲ್ಲಿ ರೋಗಿಗಳು ಸಾವನ್ನಪ್ಪಿರುವ ಪ್ರಕರಣವನ್ನು ಗಂಭೀರವಾಗಿ ಸರ್ಕಾರ ಪರಿಗಣಿಸಿತ್ತು. ಅಲ್ಲದೇ, ವಿಧಾನಸಭೆಯಲ್ಲಿಯೂ ಈ ವಿಚಾರ ಸದ್ದು ಮಾಡಿತ್ತು. ಮೃತ ಕುಟುಂಬಸ್ಥರಿಗೆ ತಲಾ 25 ಲಕ್ಷ ಪರಿಹಾರಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.


Spread the love

About Laxminews 24x7

Check Also

ನಂದಗಡದ  ಶ್ರೀಮಠದಲ್ಲಿ ಗೋ ಶಾಲೆ ನಿರ್ಮಾಣ ಸೇರಿದಂತೆ ಇನ್ನಿತರ ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗೆ ಮನವಿ

Spread the love ಖಾನಾಪೂರ: ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮದ ಶ್ರೀ ಮಠದ ಉತ್ತರಾಧಿಕಾರಿಗಳಾದ ಪೂಜ್ಯ ಶ್ರೀ ಚನ್ನವೀರ ದೇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ