ಬೆಂಗಳೂರು: ರಾಜ್ಯ ಸರ್ಕಾರದ ಅನೇಕ ಇಲಾಖೆಗಳ ನೌಕರರ ಅಂತರ್ ಜಿಲ್ಲಾ ವರ್ಗಾವಣೆಗೆ ಇದ್ದ ಅವಕಾಶಕ್ಕೆ ಕತ್ತರಿ ಬಿದ್ದಿದೆ.
ಕೆಲವು ಇಲಾಖೆಗಳ ಸಿ ಮತ್ತು ಡಿ ದರ್ಜೆಯ ನೌಕರರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಗಳ 16(ಎ) ರದ್ದುಗೊಳಿಸಲಾಗಿದ್ದು, ಇದರಿಂದಾಗಿ ನಿವೃತ್ತಿಯೊಳಗೆ ಬಯಸಿದ ಜಿಲ್ಲೆಗೆ ಅಥವಾ ಸ್ವಂತ ಜಿಲ್ಲೆಗೆ ವರ್ಗಾವಣೆ ಪಡೆಯುವ ಅವಕಾಶದಿಂದ ವಂಚಿತರಾಗುವಂತಾಗಿದೆ.
ಅಬಕಾರಿ, ಪೊಲೀಸ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಂದಾಯ ಇಲಾಖೆಗಳಲ್ಲಿನ ಸಿಬ್ಬಂದಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಇದ್ದ ಅವಕಾಶಕ್ಕೆ ಕತ್ತರಿ ಬಿದ್ದಿದೆ. ಪತಿ, ಪತ್ನಿ ಪ್ರಕರಣಗಳಿಗಾದರೂ ವಿಶೇಷ ವಿನಾಯಿತಿ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ, ಅಬಕಾರಿ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ನೌಕರರಲ್ಲಿ ಅನೇಕ ದಂಪತಿಗಳು ಬೇರೆ ಬೇರೆ ಕಡೆ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಮಟ್ಟದ ಜೇಷ್ಠತೆ ಆಧಾರದಲ್ಲಿ ಸಿಗಬೇಕಿದ್ದ ವರ್ಗಾವಣೆ 16(ಎ) ರದ್ದಾಗಿರುವುದರಿಂದ ಅಂತರ್ ಜಿಲ್ಲಾ ವರ್ಗಾವಣೆ ಅವಕಾಶ ಕೈತಪ್ಪಿ ಹೋಗಿದೆ.
ಪ್ರಭಾವ ಬಳಸಿ ಸರ್ಕಾರಿ ನೌಕರರು, ಸಿಬ್ಬಂದಿ ವರ್ಗಾವಣೆಗೆ ದುಂಬಾಲು ಬೀಳುತ್ತಾರೆ. ವರ್ಗಾವಣೆ ನೆಪದಿಂದ ಸರ್ಕಾರಿ ಕೆಲಸಗಳು ವಿಳಂಬವಾಗುತ್ತವೆ. ಇಲಾಖೆಗಳ ಅಧಿಕಾರಿಗಳ ಮೇಲೆ ವರ್ಗಾವಣೆಗೆ ಒತ್ತಡ ಹಾಕಲಾಗುತ್ತದೆ. ಈ ಕಾರಣದಿಂದಾಗಿ ಕರ್ನಾಟಕ ನಾಗರೀಕ ಸೇವಾ ನಿಯಮಗಳ 16(ಎ) ರದ್ದುಗೊಳಿಸಲಾಗಿದೆ. ಅಂತರ ಜಿಲ್ಲಾ ವರ್ಗಾವಣೆಗಿದ್ದ ಅವಕಾಶಕ್ಕೆ ಬ್ರೇಕ್ ಬಿದ್ದಿದೆ.
Laxmi News 24×7