Breaking News
Home / ರಾಜ್ಯ / BSY ಸ್ವಾಗತಕ್ಕೆ ಬರಲಿಲ್ಲ ಹುಬ್ಬಳ್ಳಿ ಬಿಜೆಪಿ ನಾಯಕರು!

BSY ಸ್ವಾಗತಕ್ಕೆ ಬರಲಿಲ್ಲ ಹುಬ್ಬಳ್ಳಿ ಬಿಜೆಪಿ ನಾಯಕರು!

Spread the love

ಹುಬ್ಬಳ್ಳಿ (ಸೆ.18): ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ಏಕಾಂಗಿ ಆದ್ರಾ? ಅನ್ನೋ ಪ್ರಶ್ನೆ ಇದೀಗ ಎಲ್ಲರನ್ನೂ ಕಾಡಲಾರಂಭಿಸಿದೆ. ಅದಕ್ಕೆ ಕಾರಣ ಯಡಿಯೂರಪ್ಪ ಹುಬ್ಬಳ್ಳಿಗೆ (Hubballi) ಆಗಮಿಸಿದ ಸಂದರ್ಭದಲ್ಲಿ ಯಾವೊಬ್ಬ ಸ್ಥಳೀಯ ನಾಯಕರು ಅತ್ತ ಸುಳಿಯದೇ ಇರೋದು ಚರ್ಚೆಗೆ ಗ್ರಾಸವಾಗಿದೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ (Airport) ಆಗಮಿಸಿದ ಸಂದರ್ಭದಲ್ಲಿ ಒಬ್ಬ ಸ್ಥಳೀಯ ಬಿಜೆಪಿ ನಾಯಕರೂ (BJP Leaders) ಸಹ ಸ್ವಾಗತಕ್ಕೆ ಬಂದಿರಲಿಲ್ಲ.

ಬಿಎಸ್​ವೈ ಸ್ವಾಗತಕ್ಕೆ ಬರಲಿಲ್ಲ ನಾಯಕರು

ಬಿಜೆಪಿ ನಗರ ಘಟಕ ಮತ್ತು ಘಟಕ ಅಧ್ಯಕ್ಷರು ಸೇರಿ ಯಾರೊಬ್ಬರೂ ಬಂದಿರಲಿಲ್ಲ. ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಆರೋಗ್ಯ ಶಿಬಿರದಲ್ಲಿ ಮುಖಂಡರು ಭಾಗಿಯಾಗಿದ್ದರು. ಪ್ರಹ್ಲಾದ ಜೋಶಿ, ಜಗದೀಶ್ ಶೆಟ್ಟರ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನಾಯಕರು ಬಿಜಿಯಾಗಿದ್ದರು. ಬೆಳಗಾವಿ ಜಿಲ್ಲೆಯ ಕೆಲ ನಾಯಕರು ಆಗಮಿಸಿ ಯಡಿಯೂರಪ್ಪರನ್ನು ಏರ್ ಪೋರ್ಟ್ ನಿಂದ ಕರೆದೊಯ್ದರು.

ಏಕಾಂಗಿಯಾದ್ರಾ ರಾಜಾಹುಲಿ!

ಪ್ರತಿ ಬಾರಿ ಯಡಿಯೂರಪ್ಪ ಹುಬ್ಬಳ್ಳಿ ಏರ್ ಪೋರ್ಟ್ ಗೆ ಬಂದಾಗ ಜನಜಂಗುಳಿ ವಾತಾವರಣ ಇರ್ತಿತ್ತು. ಬಿಜೆಪಿ ನಾಯಕರು ಅಭೂತಪೂರ್ವ ಸ್ವಾಗತ ಕೋರುತ್ತಿದ್ದರು. ಆದರೆ ಈ ಬಾರಿ ಯಾರೊಬ್ಬರೂ ಬಾರದೇ ಇರೋದು ಅಚ್ಚರಿಗೆ ಕಾರಣವಾಗಿದೆ. ಬಿಡಿಎ ಹಗರಣದ ಕೇಸ್​ ಬಳಿಕ ನಾಯಕರು, ಯಡಿಯೂರಪ್ಪ ಅವರ ಜೊತೆ ಅಂತರ ಕಾಯ್ದುಕೊಳ್ಳುತ್ತಿದ್ದಾರಾ ಅನ್ನೋ ಪ್ರಶ್ನೆ ಕಾಡಲಾರಂಭಿಸಿದೆ. ರಾಜಾಹುಲಿ ಏಕಾಂಗಿಯಾದ್ರಾ ಅನ್ನೋ ಚರ್ಚೆ ನಡೆದಿದೆ.


Spread the love

About Laxminews 24x7

Check Also

ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಅರ್ಧಕ್ಕೆ ನಿಂತ ಧಾರವಾಡ-ಗೋವಾ ಎರಡು ಮೇಲ್ಸೇತುವೆ ಕಾಮಗಾರಿ

Spread the loveಧಾರವಾಡ, ಜುಲೈ 03: ಪ್ರವಾಸಿಗರ ನೆಚ್ಚಿನ ತಾಣವಾದ ಗೋವಾಕ್ಕೆ (Goa) ಹೋಗಬೇಕೆಂದರೆ ಉತ್ತರ ಕರ್ನಾಟಕದ ಬಹುತೇಕ ಜನರು ಧಾರವಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ