Breaking News

ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ‌ ಆರೋಗ್ಯ ವಿಚಾರಿಸಿದ್ದಾರೆ.

Spread the love

ಬೆಳಗಾವಿ: ಡೆಪ್ಯುಟಿ ಸ್ಪೀಕರ್, ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಮಾಮನಿ(Anand Mamani) ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಚೆನ್ನೈನಿಂದ ಬೆಂಗಳೂರು ಮನಿಪಾಲ ಆಸ್ಪತ್ರೆಗೆ(Manipal Hospital) ಆನಂದ ಮಾಮನಿ ಅವರನ್ನು ಶಿಫ್ಟ್​ ಮಾಡಲಾಗಿದೆ.

‌ಬೆಂಗಳೂರಿನ ಮನಿಪಾಲ್ ಆಸ್ಪತ್ರೆಗೆ ಸ್ವಾಮೀಜಿ, ಶಾಸಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ, ರಾಯಭಾಗ ಶಾಸಕ, ಆದಿ ಜಾಂಭವ ನಿಗಮ ಅಧ್ಯಕ್ಷ ದುರ್ಯೋಧನ ಐಹೊಳೆ ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ‌ ಆರೋಗ್ಯ ವಿಚಾರಿಸಿದ್ದಾರೆ. ಆರೋಗ್ಯ ವಿಚಾರಣೆ ಬಳಿಕ ಚಂದ್ರಶೇಖರ ಸ್ವಾಮೀಜಿ ಮಾತನಾಡಿದ್ದು, ಆನಂದ ಮಾಮನಿ ಅವರ ಆರೋಗ್ಯ ಚೆನ್ನಾಗಿದೆ, ಯಾವುದೇ ಆತಂಕ ಇಲ್ಲ. ಆದಷ್ಟು ಬೇಗ ಆನಂದ ಮಾಮನಿ ಗುಣಮುಖರಾಗಲಿ ಎಂದು ಪ್ರಾರ್ಥನೆ ಮಾಡೋಣ. ಆನಂದ ಮಾಮನಿ ಆರೋಗ್ಯ ಚೇತರಿಕೆಗೆ ದೇವರಲ್ಲಿ ಪಾರ್ಥನೆ ಮಾಡಿ. ಯಾರು ಭಯಪಡುವ ಅವಶ್ಯಕತೆ ಇಲ್ಲ ಎಂದರು.

ಕೆಲ ದಿನಗಳ ಹಿಂದೆ ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರಾಗಿ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ