Breaking News

ಸರಕಾರಕ್ಕೆ ತಾಕತ್ತು ಇದ್ದರೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕನ ಮೇಲೆ ಇಡಿ, ಐಟಿ ದಾಳಿ ನಡೆಸಿ:A.A.P. ಭಾಸ್ಕರ್ ರಾವ್

Spread the love

ಸರಕಾರ ದರ್ಪದಿಂದ ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ೪೦% ವ್ಯವಹಾರ ಗಡಿ ದಾಟಿ ಹೈದರಾಬಾದ್ ಹೋಗಿ ಪೋಸ್ಟರ್ ಹಾಕಿ ಮಾನ ಮರ್ಯಾದೆ ತೆಗೆದುಕೊಂಡಿದೆ ಎಂದು ಆಮ್ ಆದ್ಮಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದರು.

ಇಂದು ಮಂಗಳವಾರ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾಸ್ಕರ್ ರಾವ್ ರವರು, ಸರಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅಸಹಾಯವಾಗಿ ಸಿಎಂ ಹೇಳುತ್ತಾರೆ. ಇದನ್ನು ನಾವು ಮಾಡಿಲ್ಲ ಎನ್ನುತ್ತಾರೆ. ಆದರೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಮೇಲೆ ಎಸಿಬಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಸುಜೀತ ಮುಳಗುಂದ ಅವರು ಸಭಾಪತಿ ಕಡೆಯಿಂದ ತೆಗೆದುಕೊಂಡು ಹೋದರೆ ಅದನ್ನು ತಿರಸ್ಕರಿಸಿದ್ದಾರೆ.

ಭ್ರಷ್ಟಾ ಶಾಸಕನ ಪರವಾಗಿ ಸರಕಾರ ನಿಂತಿರುವುದು ದುರ್ದೈವದ ಸಂಗತಿ. ಇಂಥ ಭ್ರಷ್ಟಾಚಾರಿ ಶಾಸಕನಿಗೆ ಸರಕಾರ ಬೆಂಬಲ ಕೊಡುವುದು ತಪ್ಪು. ಬೇರೆಯವರಿಗೆ ಕೇಂದ್ರ ಸರಕಾರ ಇಡಿ, ಐಟಿ ದಾಳಿ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ಮುಂದುವರೆದು ಮಾತನಾಡಿದ ಅವರು, ನಿಜವಾದ ಭ್ರಷ್ಟಾಚಾರ ಮುಕ್ತ ಮಾಡಬೇಕಾದರೆ ಕೇವಲ ವಿರೋಧ ಪಕ್ಷದವರ ಮೇಲೆ ದಾಳಿ ಮಾಡುವ ಬದಲು ಸರಕಾರಕ್ಕೆ ತಾಕತ್ತು ಇದ್ದರೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕನ ಮೇಲೆ ಇಡಿ, ಐಟಿ ದಾಳಿ ನಡೆಸಿ ತನಿಖೆ ನಡೆಸುವಂತೆ ಆಗ್ರಹಿಸಿದರು. ಬೆಳಗಾವಿಯ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ತೂಕದಿಂದ ಮೋಸ ಮಾಡಿ, ಹಣ ಪಾವತಿ ಮಾಡದೆ ಇರುವ ಪ್ರಕರಣ ಸಾಕಷ್ಟಿದೆ. ನಮಗೆ ಅವಕಾಶ ಬಂದರೆ ಪ್ರತಿ ಟನ್ ಗೆ ೩,೫೦೦ ರೂ.

ಕೊಡಲು ಸಿದ್ಧರಿದ್ದೇವೆ ಎಂದರು. ಕಬ್ಬು ಬೆಳೆಗಾರರಿಗೆ ಸರಕಾರ ನಿರಂತರವಾಗಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ಆಮ್ ಆದ್ಮಿಯಿಂದ ನಾವು ಯಾವುದೇ ಸಕ್ಕರೆ ಕಾರ್ಖಾನೆ ಇಟ್ಟುಕೊಂಡಿಲ್ಲ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸರಕಾರದಿಂದ ರೈತರಿಗೆ ನ್ಯಾಯ ಕೊಡಿಸಲು ಸಾಧ್ಯವಾಗುವುದಿಲ್ಲ ಎಂದ ಅಸಮಾಧಾನ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಮೂಡಲಗಿ – ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರ ಅಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು

Spread the loveಮೂಡಲಗಿ – ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ನಾಗರಿಕರ ಅಶೋತ್ತರಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ