ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ-ಯಲ್ಲಾಪುರ ಗ್ರಾಮದ ಮನೆಯೊಂದರಲ್ಲಿ ಬೆಳಿಗ್ಗೆ ಸಿಲಿಂಡರ್ ಸ್ಫೋಟವಾಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ನಡೆದಿದೆ.
ಕರಗುಪ್ಪಿ-ಯಲ್ಲಾಪುರ ಗ್ರಾಮದ ಗೌಡ್ರ ಓಣಿಯ ಅಲಗೌಡ ಅಪ್ಪರಾಯಗೌಡ ಪಾಟೀಲ ಎಂಬುವವರ ಮನೆಯಲ್ಲಿ ಅಡುಗೆ ಮಾಡಲು ಓಲೆಯ ಮೇಲೆ ಇಟ್ಟು ಹೊರಗಡೆ ಹೋದ ಸಂದರ್ಭದಲ್ಲಿ ಸಿಲಿಂಡರ್ ಗ್ಯಾಸ್ ಲೀಕ್ ಆಗಿ ಈ ದುರಂತ ಸಂಭವಿಸಿದೆ.
ಶೇ.೫೦ರಷ್ಟು ಮನೆ ಸಂಪೂರ್ಣವಾಗಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಆಗಮಿಸಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟರು.