Breaking News

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ರಿಟೈರ್ಡ್ ಆದ R.T.O. ಜೈಲಿಗೆ

Spread the love

ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸಾರಿಗೆ ಅಧಿಕಾರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ 4 ವರ್ಷ ಕಠಿಣ ಶಿಕ್ಷೆ ಮತ್ತು 63 ಲಕ್ಷ ರೂ. ಭಾರಿ ಮೊತ್ತದ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಪಿ.ಶಾಂತಕುಮಾರ ತಂದೆ ಮನ್ನಸ್ವಾಮಿ, ಎಆರ್‍ಟಿಓ ಆರ್‍ಟಿ, ಠಾಣೆ ಹುಮನಾಬಾದ ಜಿಲ್ಲಾ: ಬೀದರ್ ಇವರು ತಮ್ಮ ಸೇವಾ ಅವಧಿಯಲ್ಲಿ ಭ್ರಷ್ಟಾಚಾರ ಮತ್ತು ಲಂಚಗುಳಿತನದಿಂದ ಅಕ್ರಮ ಆಸ್ತಿಯನ್ನು ಸಂಪಾದಿಸಿದರ ಕುರಿತು ಗುಪ್ತ ಮಹಿತಿ ಕಲೆಹಾಕಿ ಆರ್.ಕೆ. ಪಾಟೀಲ್ ಪೊಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ ಬೆಳಗಾವಿ ಇವರು ದಿನಾಂಕ: 03,05.2010 ರಂದು ಪ್ರಕರಣ ದಾಖಲಿಸಿಕೊಂಡಿದ್ದರು. ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದರು.

ನಂತರ ಆರ್.ಬಿ.ಹವಲ್ದಾರ ಪೆÇಲೀಸ್ ನಿರೀಕ್ಷಕರು, ಕರ್ನಾಟಕ ಲೋಕಾಯುಕ್ತ ಬೆಳಗಾವಿ ಅವರು ಮುಂದಿನ ತನಿಖೆ ಕೈಕೊಂಡು ಒಟ್ಟು ಆಸ್ತಿಯಲ್ಲಿ ರೂ.1,14,62,121/- ಮೌಲ್ಯದ ಅಕ್ರಮ ಆಸ್ತಿ ಹೊಂದಿದ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸಿದ 4ನೇ ಅಧಿಕ ಜಿಲ್ಲಾ ಸತ್ರ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮೋಹನ ಪ್ರಭು ಅವರು ಆಪಾದಿತ ಅಧಿಕಾರಿ ಪಿ ಶಾಂತಕುಮಾರ ತಂದೆ ಮುನ್ನಸ್ವಾಮಿ (ಹಿಂದಿನ) ಎಆರ್‍ಟಿಓ, ಆರ್‍ಟಿಓ, ಠಾಣೆ ಹುಮನಾಬಾದ ಜಿಲ್ಲಾ: ಬೀದರ್ ಹಾಲಿ: ಪ್ಲಾಟ್ ನಂ 1998 ಆಂಜನೇಯನಗರ, ಜಿ:ಬೆಳಗಾವಿ ಅವರು ರೂ.63,00,000/- ಮೌಲ್ಯದ ಆಸ್ತಿಯನ್ನು ಭ್ರಷ್ಟಾಚಾರ ಮತ್ತು ಲಂಚಗುಳಿತನದಿಂದ ಸಂಪಾದಿಸಿರುತ್ತಾರೆಂದು ಪರಿಗಣಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.ಅಧಿಕಾರಿ ತಪ್ಪಿತಸ್ಥನೆಂದು ತೀರ್ಪು ನೀಡಿ ಆರೋಪಿಗೆ 4 ವರ್ಷ ಕಠಿಣ ಶಿಕ್ಷೆ ಮತ್ತು ರೂ.63,00,000/- ದಂಡ ವಿಧಿಸಿದೆ. ದಂಡದ ಹಣವನ್ನು ತುಂಬದೇ ಇದ್ದ ಪಕ್ಷದಲ್ಲಿ ಆರೋಪಿತನ ಹಾಗೂ ಆತನ ಹೆಂಡತಿಯ ಹೆಸರಿಯಲ್ಲಿರುವ ಚರ ಮತ್ತು ಚಿರಾಸ್ಥಿಗಳನ್ನು ಮುಟ್ಟುಗೋಲು ಹಾಕಲು ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ