ಬೆಂಗಳೂರು : ರಾಜ್ಯ ಸರಕಾರದ ಭ್ರಷ್ಟಾಚಾರದ ವಿರುದ್ಧ ಹೋರಾಟ ತೀವ್ರಗೊಳಿಸಿರುವ ಕಾಂಗ್ರೆಸ್ ಈಗ ” ಪೇಸಿಎಂ” ಎಂಬ ವಿಶಿಷ್ಟ ಅಭಿಯಾನ ಆರಂಭಿಸಿದೆ.
ರಾಜಧಾನಿ ಬೆಂಗಳೂರಿನ ಆಯಕಟ್ಟಿನ ಸ್ಥಳಗಳಲ್ಲಿ “ಪೇಸಿಎಂ” ಪೋಸ್ಟರ್ ಅಂಟಿಸಲಾಗಿದೆ.
ಜತೆಗೆ ಸಾಮಾಜಿಕ ಜಾಲತಾಣದಲ್ಲೂ ಈ ಅಭಿಯಾನ ತೀವ್ರಗೊಳಿಸಲಾಗಿದೆ.
ಕ್ಯೂ ಆರ್ ಕೋಡ್ ಇರುವ ಪೇಟಿಎಂ ಮಾದರಿ ಸ್ಟಿಕರ್ ನ್ನು ಪೇಸಿಎಂ ಎಂದು ಬದಲಾಯಿಸಿ ಇಲ್ಲಿ 40% ಕಮಿಷನ್ ಸ್ವೀಕರಿಸಲಾಗುವುದು ಎಂದು ವ್ಯಂಗ್ಯವಾಡಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ನಡೆಸುತ್ತಿರುವ ಈ ಅಭಿಯಾನ ಸಿಎಂ ಬೊಮ್ಮಾಯಿ ಅವರನ್ನು ಕೆರಳಿಸಿದ್ದು, ಗುಪ್ತದಳದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.