Breaking News
Home / ರಾಜಕೀಯ / ಭಾರತ್‌ ಜೋಡೋ ಯಾತ್ರಿಗಳ ಸಮಿತಿಗೆ ದೇಶಪಾಂಡೆ ಅಧ್ಯಕ್ಷ

ಭಾರತ್‌ ಜೋಡೋ ಯಾತ್ರಿಗಳ ಸಮಿತಿಗೆ ದೇಶಪಾಂಡೆ ಅಧ್ಯಕ್ಷ

Spread the love

ಬೆಂಗಳೂರು: ರಾಹುಲ್‌ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರಿಗಳ ರಾಜ್ಯ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಅವರನ್ನು ನೇಮಿಸಲಾಗಿದೆ.

ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಪಕ್ಷದ ವಲಯದಲ್ಲಿ ಅಸಮಾಧಾನ ಉಂಟಾಗಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಂದ ಈ ನೇಮಕಾತಿ ಆದೇಶ ಹೊರಬಿದ್ದಿದೆ.

 

ದೇಶಪಾಂಡೆ ಅವರ ನೇತೃತ್ವದಲ್ಲಿ 22 ಮಂದಿ ಶಾಸಕರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳನ್ನು ಸಮಿತಿಗೆ ನೇಮಿಸಲಾಗಿದೆ. ಭಾರತ್‌ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಸಮಿತಿಗಳಲ್ಲಿ ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಹಾಗೂ ಪಕ್ಷದ ಕಾರ್ಯಕ್ರಮದಲ್ಲೇ ಬಹಿರಂಗವಾಗಿ ರಾಹುಲ್‌ಗಾಂಧಿಯವರ ಕಾರ್ಯಕ್ರಮಕ್ಕೆ ಜನರನ್ನು ಕಳುಹಿಸಿ ಎಂದರೆ ಸಾಧ್ಯವಿಲ್ಲ ಎಂದು ದೇಶಪಾಂಡೆ ಅವರು ಹೇಳಿದರು ಎಂದು ಡಿ.ಕೆ.ಶಿವಕುಮಾರ್‌ ಅಸಮಾಧಾನ ಹೊರಹಾಕಿದ್ದ ಬಗ್ಗೆ ಪಕ್ಷದ ಶಾಸಕರ ವಲಯದಲ್ಲಿ ಅಸಮಾಧಾನ ಉಂಟಾಗಿತ್ತು.

ಇದೇ ಸಂದರ್ಭದಲ್ಲಿ ಭಾರತ್‌ ಜೋಡೋ ಯಾತ್ರೆಯ ಸಾರಿಗೆ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅವರನ್ನು ನೇಮಿಸಿ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಬೈಲಹೊಂಗಲದಲ್ಲಿ ಇದ್ದಾರೆ ‘ಹತ್ತು ರೂಪಾಯಿ’ ಡಾಕ್ಟ್ರು

Spread the love ಬೈಲಹೊಂಗಲ: ಇದು ದುಬಾರಿ ಯುಗ. ಇಂದು ಬಹುತೇಕ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶುಲ್ಕ ಜನರ ಕೈಸುಡುತ್ತಿದೆ. ಆದರೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ