Breaking News
Home / ರಾಜಕೀಯ / ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

ಸಿಎಂ ತಂಟೆಗೆ ಬರಬೇಡಿ: ಕಾಂಗ್ರೆಸ್ ವಿರುದ್ಧ ಲಿಂಗಾಯತ ಸಮುದಾಯ ಆಕ್ರೋಶ

Spread the love

ಲಬುರ್ಗಿ: ‘ಪೇ ಸಿಎಂ’ ಅಭಿಯಾನಕ್ಕೆ ಲಿಂಗಾಯತ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ನವರೇ ಸಮುದಾಯದ ತಂಟೆಗೆ ಬರಬೇಡಿ, ಬಂದಲ್ಲಿ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಪೋಸ್ಟರ್ ಗಳನ್ನು ಕಲಬುರ್ಗಿ ನಗರದ ವಿವಿಧಡೆ ಹಚ್ಚಲಾಗಿದೆ.

 

ವೀರಶೈವ ಲಿಂಗಾಯತ ಸ್ವಾಭಿಮಾನಿ ಬಳಗ, ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತಾಗಿದೆ. ವೀರಶೈವ ಲಿಂಗಾಯತರ ಭಾವನೆಗಳಿಗೆ ಅವಮಾನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗರೇ ಲಿಂಗಾಯತ ಸಮುದಾಯದ ಸಿಎಂ ತಂಟೆಗೆ ಬರಬೇಡಿ, ಬಂದರೆ ಮುಂದೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆಯ ಪೋಸ್ಟರ್ ಗಳನ್ನು ಹಚ್ಚಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಪರವಾಗಿ ಘೋಷಣೆ ಕೂಗಿದ್ದಾರೆ.


Spread the love

About Laxminews 24x7

Check Also

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

Spread the love ಬೆಳಗಾವಿ: ಆಸ್ತಿ ಕಬಳಿಸಲು ಮಾಟಮಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಷ್ಠಿತ ಉದ್ಯಮಿ ವಿಜಯ ಸಂಕೇಶ್ವರ ಅವರ ಪುತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ