Breaking News

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸದಸ್ಯರಿಗಿಲ್ಲ ಆಸನ; ಹುಬ್ಬಳ್ಳಿಯಲ್ಲಿ ಆಗಿದ್ದೇನು?

Spread the love

ಹುಬ್ಬಳ್ಳಿ: ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಇಲ್ಲವೆಂದು ಪಾಲಿಕೆ ಕಾಂಗ್ರೆಸ್ ಸದಸ್ಯರು ಕೆಲ ಕಾಲ ನೆಲದ ಮೇಲೆ ಕುಳಿತ ಘಟನೆ ನಡೆಯಿತು. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಆಸನ ವ್ಯವಸ್ಥೆ ಮಾಡಿದರು.

 

ವೇದಿಕೆಯಲ್ಲಿ ಪಾಲಿಕೆ ವಿಪಕ್ಷ ನಾಯಕರಿಗೆ ಅವಕಾಶ ನೀಡಿಲ್ಲವೆಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದರು. ಸೋಮವಾರ ಬೆಳಿಗ್ಗೆ ಮನಸ್ಸು ಬದಲಿಸಿ ಕಾರ್ಯಮದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದರು.

ಪಾಲಿಕೆ ಕಾಂಗ್ರೆಸ್ ಸದಸ್ಯರು ಕಾರ್ಯಕ್ರಮಕ್ಕೆ ಆಗಮಿಸಿದಾಗ ಪಾಲಿಕೆ ಸದಸ್ಯರಿಗೆಂದು ನಿಗದಿ ಪಡಿಸಿದ್ದ ಆಸನಗಳಲ್ಲಿ ಪಾಲಿಕೆ ಸದಸ್ಯರಲ್ಲದವರು ಆಸೀನರಾಗಿದ್ದರು.

 

ಪಾಲಿಕೆ ಸದಸ್ಯರಿಗೆ ಆಸನ ಬಿಟ್ಟುಕೊಡುವಂತೆ ಹೇಳಿದರು ಯಾರು ಆಸನ ಬಿಟ್ಟು ಕೊಡದಾದಾಗ ಪಾಲಿಕೆ ಕಾಂಗ್ರೆಸ್ ಸದಸ್ಯರು ನೆಲದ ಮೇಲೆ ಕುಳಿತರು. ರಾಷ್ಟ್ರಪತಿಯವರು ವೇದಿಕೆಗೆ ಆಗಮಿಸುವ ಕೆಲವೇ ನಿಮಿಷ ಮೊದಲು ಈ ಘಟನೆ ನಡೆಯಿತು.

ಗೊಂದಲದ ಸ್ಥಿತಿ ನಿರ್ಮಾಣ ಗೊಂಡಿತಾದರು, ತಕ್ಷಣಕ್ಕೆ ಅಧಿಕಾರಿಗಳು ಆಸನ ವ್ಯವಸ್ಥೆ ಕಲ್ಪಿಸಿ ಗೊಂದಲ ನಿವಾರಿಸಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ