Breaking News

ಮತ್ತೆ ಪಿಎಸ್‌ಐ ಪರೀಕ್ಷಾ ಅಕ್ರಮದ ಸದ್ದು; ಬ್ಲೂಟೂತ್ ನಲ್ಲಿ ಉತ್ತರ ಹೇಳಿದ್ದಾತನ ಬಂಧನ

Spread the love

ಲಬುರಗಿ: ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಸಹಚರ, ಹಾಸ್ಟೆಲ್ ವಾರ್ಡನ್ ರಾವುತಪ್ಪ‌ ಬಸವಂತ್ರಾಯ ವಾಲೀಕಾರ (35) ಎಂಬಾತನನ್ನು ಗುರುವಾರ ಬಂಧಿಸಿದೆ.

 

ನಗರದ ಜ್ಞಾನಜ್ಯೋತಿ ಇಂಗ್ಲಿಷ್ ‌ಮಾಧ್ಯಮ ಶಾಲೆಯ ಪಿಎಸ್‌ಐ ‌ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ರಾವುತಪ್ಪ ಬ್ಲೂಟೂತ್ ಬಳಸಿ ಉತ್ತರ ಹೇಳುವ ಮೂಲಕ ಅಭ್ಯರ್ಥಿಗಳು ಪಾಸ್ ಆಗಲು ಸಹಕರಿಸಿದ್ದ. ಜೊತೆಗೆ ಆರ್.ಡಿ. ಪಾಟೀಲಗೆ ಗಿರಾಕಿಗಳನ್ನು ಹುಡುಕಿ ತರುತ್ತಿದ್ದ. ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸುವ ತಜ್ಞರ ತಂಡವನ್ನು ಈತನೇ ಗೊತ್ತು ಮಾಡುತ್ತಿದ್ದ. ಒಮ್ಮೊಮ್ಮೆ ಈತನೇ ಉತ್ತರಗಳನ್ನು ಹೇಳುತ್ತಿದ್ದ ಎನ್ನಲಾಗಿದೆ.


Spread the love

About Laxminews 24x7

Check Also

ಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ ಹೆಚ್ಚು.

Spread the loveಕೊಟಗುಂಡಹುಣಸಿಯಲ್ಲಿ ನಿವ ಅದೇಷ್ಟೋ ಜನ ನಿವೃತ್ತಿಯಾದ ನಂತರ ತಾವಾಯ್ತು, ತಮ್ಮ ಕುಟುಂಬ ಆಯಿತು ಅಂತಾ ಕಾಲ ಕಳೆಯುವವರೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ