Breaking News

ಬೋನಸ್ ನೀಡದ್ದಕ್ಕೆ ಗ್ರಾಮ ಪಂಚಾಯಿತಿಗೆ ಚಪ್ಪಲಿ ಹಾರ

Spread the love

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮ ಪಂಚಾಯಿತಿಗೆ ಗಾಂಧಿ ಜಯಂತಿಯಂದೇ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಗಾಂಧಿ ಜಯಂತಿ ಆಚರಣೆ ಮಾಡಿ ಕಚೇರಿಗೆ ಬಾಗಿಲು ಹಾಕಿ ಹೋಗಲಾಗಿತ್ತು. ಸಿಬ್ಬಂದಿ ಮನೆಗೆ ಹೋದ ನಂತರ ಈ ಕೃತ್ಯ ಎಸಗಲಾಗಿದೆ.

ಈ ಬಗ್ಗೆ ದೇವನಹಳ್ಳಿ ತಾಲೂಕು ಪಂಚಾಯಿತಿ ಇಒ ವಸಂತ್ ಕುಮಾರ್ ಸೂಚನೆ ಮೇರೆಗೆ ಪಿಡಿಒ ಶಿವರಾಜ್ ವಿಜಯಪುರ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಪ್ರತಿ ವರ್ಷ ದಸರಾ ಹಬ್ಬಕ್ಕೆ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಬೋನಸ್ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಬೋನಸ್ ನೀಡಲು ಪಿಡಿಒ ನಿರಾಕರಿಸಿದ್ದಾರೆ.

ಈ ಕಾರಣಕ್ಕೆ ಸಿಬ್ಬಂದಿಗಳೇ ಆಕ್ರೋಶಗೊಂಡು ಈ ರೀತಿಯ ಕೃತ್ಯ ಮಾಡಲಾಗಿದೆ ಎಂಬ ಆರೋಪಿಗಳು ಕೇಳಿ ಬರುತ್ತಿವೆ. ಗ್ರಾಮಪಂಚಾಯತ್​ನಲ್ಲಿರುವ ಸಿಸಿಟಿವಿ ವಿಡಿಯೋ ಆಧರಿಸಿ ಪೊಲೀಸರು ತನಿಖೆ ಮಾಡಲಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ