Breaking News

ಕುಸ್ತಿ ಗೆದ್ದ ಒಂದೇ ಗಂಟೆಯಲ್ಲಿ ಯುವ ಕುಸ್ತಿಪಟು ಸಾವು

Spread the love

ಸೊಲ್ಲಾಪುರ/ಮಹಾರಾಷ್ಟ್ರ: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ.

ಕುಸ್ತಿಯಲ್ಲಿ ಗೆದ್ದು ಸಂಭ್ರಮದ ಗುಂಗಿನಲ್ಲಿರುವಾಗಲೇ ಹೃದಯಾಘಾತದಿಂದ ಯುವ ಕುಸ್ತಿಪಟು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಂಢರಪುರ ತಾಲೂಕಿನಲ್ಲಿ ನಡೆದಿದೆ.

ವಖ್ರಿಯ ಕುಸ್ತಿಪಟು ಮಾರುತಿ ಸುರವಾಸೆ (22) ಮೃತ ಯುವಕ. ಕಳೆದ ರಾತ್ರಿ ಕೊಲ್ಲಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಕುಸ್ತಿ ಪಂದ್ಯವನ್ನು ಮಾರುತಿ ಗೆದ್ದಿದ್ದರು. ಬಳಿಕ ಖುಷಿಯಿಂದ ಹಿಂದಿರುಗಿದ ಸ್ವಲ್ಪ ಸಮಯದ ನಂತರ ಹೃದಯಾಘಾತವಾಗಿದೆ.

ಮಾರುತಿಗೆ ಬಾಲ್ಯದಿಂದಲೂ ಕುಸ್ತಿಯೆಂದರೆ ಹೆಚ್ಚಿನ ಒಲವು. ಕುಸ್ತಿಯಲ್ಲಿ ವೃತ್ತಿಜೀವನ ಮುಂದುವರಿಸಬೇಕೆಂದು ತರಬೇತಿಗಾಗಿ ಕೊಲ್ಲಾಪುರಕ್ಕೆ ಕಳುಹಿಸಲಾಗಿತ್ತು. ಮೃತನ ತಂದೆ ವಖ್ರಿಯಲ್ಲಿ ಕೃಷಿಕರಾಗಿದ್ದಾರೆ.


Spread the love

About Laxminews 24x7

Check Also

ಡಿ.ಕೆ. ಶಿವಕುಮಾರ್ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ

Spread the loveರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ