Breaking News

ಮುಜರಾಯಿ ಇಲಾಖೆ ಅನುದಾನ ನಮ್ಮ ರಾಜ್ಯದ ದೇವಸ್ಥಾನಕ್ಕೆ ನೀಡದೇ ಬೇರೆ ರಾಜ್ಯದ ದೇವಸ್ಥಾನಗಳಿಗೆ ಬಿಡುಗಡೆ: ಮಾಜಿ ಶಾಸಕ ರಾಜು ಕಾಗೆ ಆರೋಪ

Spread the love

ಚಿಕ್ಕೋಡಿ: ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಅನುದಾನವನ್ನು ಬೇರೆ ರಾಜ್ಯಗಳ ದೇವಸ್ಥಾನಕ್ಕೆ ನೀಡುತ್ತಿದ್ದಾರೆ. ಆದ್ರೆ, ನಮ್ಮ ಗ್ರಾಮದ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ‌ಎಂದು‌ ಮಾಜಿ ಶಾಸಕ ರಾಜು ಕಾಗೆ, ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಐನಾಪೂರ ಪಟ್ಟಣದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆಗೆ ಸಂಬಂಧಿಸಿ ಅನುದಾನವನ್ನು ಮಹಾರಾಷ್ಟ್ರ, ಆಂಧ್ರಪ್ರದೇಶ, ಕಾಶಿ ದೇವಸ್ಥಾನಗಳಿಗೆ ನೀಡಲಾಗುತ್ತಿದೆ. ಆದರೆ, ನಮಗೆ ಸರಿಯಾಗಿ ಅನುದಾನ ನೀಡುತ್ತಿಲ್ಲ ಮುಜರಾಯಿ ಇಲಾಖೆ ಅನುದಾನದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಪರೋಕ್ಷವಾಗಿ ಆರೋಪಿಸಿದ ರಾಜು ಕಾಗೆ, ದೇವಸ್ಥಾನ ನಿರ್ಮಾಣದಲ್ಲೂ ರಾಜಕಾರಣ‌‌ ಸರಿಯಲ್ಲ ಎಂದರು.

ನಮ್ಮ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದ್ದು, ಅದರಲ್ಲಿ ನಾನು ಭಾಗವಹಿಸಿದ್ದಕ್ಕೆ ಬಿಜೆಪಿ ಅವರು ದೇವಸ್ಥಾನ ನಿರ್ಮಾಣಕ್ಕಾಗಿ ದೇಣಿಗೆ ಹಣ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು

Thumbnail image


Spread the love

About Laxminews 24x7

Check Also

ಬೆಳಗಾವಿ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ

Spread the loveಬೆಳಗಾವಿ : ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನೇ ಗಾಂಜಾ ಘಮಲೇರಿಸಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ